ಸಾರಾಂಶ
ದೇವರಾಜ ಅರಸು, ಇತರರ ಜಯಂತಿ । ಶೋಷಿತರಿಗೆ ಸ್ವಾಭಿಮಾನದ ಬದುಕು ನೀಡಿದ ನಾಯಕ
ಕನ್ನಡಪ್ರಭ ವಾರ್ತೆ ಆಲೂರುಹಿಂದುಳಿದ ವರ್ಗಗಳಿಗೆ ಸಾಮಾಜಿಕ ನ್ಯಾಯ ದೊರಕಿಸಿಕೊಟ್ಟ ರಾಜ್ಯದ ಪ್ರಥಮ ಮುಖ್ಯಮಂತ್ರಿ ಡಿ. ದೇವರಾಜ ಅರಸು. ಅವರ ಕೊಡುಗೆಯನ್ನು ಎಂದಿಗೂ ಮರೆಯಲಾಗದು ಎಂದು ತಹಸೀಲ್ದಾರ್ ನಂದಕುಮಾರ್ ತಿಳಿಸಿದರು.
ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ತಾಲೂಕು ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು, ನುಲಿಯ ಚಂದಯ್ಯ, ನಾರಾಯಣಗುರು ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಹಿಂದುಳಿದ ವರ್ಗ ಎಂದರೆ ಒಂದು ಜಾತಿ ಮತಕ್ಕೆ ಸೀಮಿತವಲ್ಲ, ಶೋಷಿತ ಸಮಾಜಗಳಿಗೆ ಸ್ವಾಭಿಮಾನದ ಬದಕು ರೂಪಿಸಿದ ಧೀಮಂತ ನಾಯಕರಾಗಿದ್ದರು. ಇಂದು ಹಿಂದುಳಿದ ವರ್ಗದವರು ಉನ್ನತ ಹುದ್ದೆಗಳಲ್ಲಿರಲು ಗುಣಮಟ್ಟದ ಶಿಕ್ಷಣ ಪಡೆಯುವಲ್ಲಿ ಡಿ. ದೇವರಾಜ ಅರಸು ಮಹತ್ವದ ಪಾತ್ರ ವಹಿಸಿದ್ದರು, ಜೀತ ಪದ್ಧತಿ ಹೋಗಲಾಡಿಸುವ ನಿಟ್ಟಿನಲ್ಲಿ ಉಳುವವನೇ ಒಡೆಯ ಎಂಬ ಭೂ ಸುಧಾರಣೆ ಕಾಯ್ದೆ ಜಾರಿಗೊಳಿಸುವ ಮೂಲಕ ಡಿ.ದೇವರಾಜ ಅರಸು ಭೂಹೀನರ ಆಶಾಕಿರಣವಾದರು, ವಿದ್ಯಾರ್ಥಿಗಳು ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಹಿಂದುಳಿದ ವರ್ಗಗಳ ಆಯೋಗದ ಜಿಲ್ಲಾ ಕಾರ್ಯಅಧ್ಯಕ್ಷ ಬಿ.ಸಿ.ಶಂಕರಾಚಾರ್ ಮಾತನಾಡಿ, ಹಿಂದುಳಿದ ವರ್ಗಗಳ ಪ್ರಗತಿಗಾಗಿ ಶ್ರಮಿಸಿದ ದೇವರಾಜ ಅರಸು ಅವರ ಆದರ್ಶಗಳು ಕೇವಲ ಅವರ ಜನ್ಮದಿನಕ್ಕೆ ಸೀಮಿತವಾಗಬಾರದು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ, ವಸತಿ ಸೇರಿದಂತೆ ಅನೇಕ ಸೌಕರ್ಯಗಳನ್ನು ಕಲ್ಪಿಸುವಂಥ ಮಹತ್ವದ ಯೋಜನೆಗಳನ್ನು ಅವರು ಜಾರಿಗೊಳಿಸಿದ್ದರು, ಅವರ ಬಗ್ಗೆ ತಿಳಿದುಕೊಳ್ಳುವುದು ಅಗತ್ಯ ಎಂದು ಹೇಳಿದರು.ಗುಲ್ಬರ್ಗ ವಿವಿ ಕುಲಸಚಿವ ಡಾ.ದಯಾನಂದ, ದೇವರಾಜ ಅರಸು ಅವರಿಗೆ ಅಧಿಕಾರ ಸಿಗದಿದ್ದರೆ, ಇಂದು ಹಿಂದುಳಿದ ವರ್ಗಗಳ ಅಭಿವೃದ್ಧಿ ಮರೀಚಿಕೆಯಾಗುತ್ತಿತ್ತು. ಉಳುವವನೇ ಒಡೆಯ ಎಂಬ ನಿಯಮ ಪ್ರಥಮ ಬಾರಿಗೆ ಜಾರಿಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಇದರಿಂದ ಎಷ್ಟೋ ಬಡ ಕುಟುಂಗಳು ಅಸ್ತಿತ್ವ ಕಂಡುಕೊಂಡವು. 12ನೇ ಶತಮಾನದಲ್ಲಿ ಶರಣರ ಹಾಗೂ ಅಂಬೇಡ್ಕರ್ ಅವರ ಸಮಾನತೆ ಪರಿಕಲ್ಪನೆಯನ್ನು ದೇವರಾಜ ಅರಸು ಜಾರಿಗೆ ತರುವಲ್ಲಿ ಶ್ರಮಿಸಿದ್ದಾರೆ ಎಂದು ವಿವರಿಸಿದರು.
ಹಿರಿಯ ಸಾಹಿತಿ ಕೆ.ಬಿ.ಗುರುಮೂರ್ತಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಮಹತ್ವಪೂರ್ಣ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಮಹಾನ್ ಮಾನತಾವಾದಿಯಾಗಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಗಳು ಮನುಜ ಕುಲಕ್ಕೆ ನೀಡಿದ ವಿಶ್ವಮಾನವ ತತ್ವಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡು ಜಗತ್ತಿಗೆ ಅವರ ಸಂದೇಶಗಳನ್ನು ಸಾರಬೇಕಾಗಿದೆ ಎಂದು ಹೇಳಿದರು.ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಚಿನ್ನಯ್ ಹಾಗೂ ವಿನಾಯಕ ಮತ್ತು ಪದವಿಯಲ್ಲಿ ಹೆಚ್ಚು ಅಂಕ ಪಡೆದ ಕೆ.ಎಂ.ಪವನ್ರನ್ನು ಗೌರವಿಸಲಾಯಿತು.
ಪದವಿ ಕಾಲೇಜು ಉಪನ್ಯಾಸಕ ಮೋಹನ್ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸ್ಟೀಫನ್ ಪ್ರಕಾಶ್, ಆರೋಗ್ಯಾಧಿಕಾರಿ ಜ್ಯೋತಿ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಜಿಲ್ಲಾ ಗೌರವ ಕಾರ್ಯಾಧ್ಯಕ್ಷ ಬಿ.ಸಿ.ಶಂಕರಚಾರ್, ತಾಲೂಕು ನಾಗರಿಕ ಹೋರಾಟ ಸಮಿತಿಯ ಅಧ್ಯಕ್ಷ ಕೆ. ಎಸ್ ಮಂಜೇಗೌಡ, ಕನ್ನಡ ಸಾಹಿತ್ಯ ಪಕ್ಷ ತಾಲೂಕು ಅಧ್ಯಕ್ಷ ಗೋಪಾಲಕೃಷ್ಣ, ಮಾಜಿ ಅಧ್ಯಕ್ಷ ಗುಲಾಂ ಸುತ್ತಾರ್, ದಲಿತ ಮುಖಂಡ ವೆಂಕಟಯ್ಯ, ರಾಧಮ್ಮ ಜನಸ್ಪಂದನಾ ಸಂಸ್ಥೆಯ ಅಧ್ಯಕ್ಷ ಹೇಮಂತ್ ಕುಮಾರ್, ಶಶಿ ಅಭಿವೃದ್ಧಿ ಯೋಜನಾಧಿಕಾರಿ ಎ.ಟಿ.ಮಲ್ಲೇಶ್, ಶಿರಸ್ತೆದಾರ್ ಸೋಮಣ್ಣ, ಶ್ರೀ ಬ್ರಹ್ಮ ಗುರು ನಾರಾಯಣ ಸೇವಾ ಸಮಿತಿ ಅಧ್ಯಕ್ಷ ಯೋಗೇಶ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಲ್ಯಾಣಾಧಿಕಾರಿ ಚಂದ್ರಶೇಖರ, ಎಫ್.ಡಿ.ಎ ಆನಂದ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.ಫೋಟೋ: ಆಲೂರಿನಲ್ಲಿ ನಡೆದ ಡಿ.ದೇವರಾಜ ಅರಸು ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮುದಾಯದ ಮುಕಂಡ ಶಂಕರಾಚಾರ್ ಮಾತನಾಡಿದರು.