ಸಾರಾಂಶ
ತೇರದಾಳದ ಅಲ್ಲಮಪ್ರಭು ದೇವಸ್ಥಾನ ಕಾರ್ಯಕ್ರಮದ ಅನ್ನಪ್ರಸಾದಕ್ಕೆ ಸಲ್ಲಿಸಲು ತಾಲೂಕಿನ ಗೋಲಬಾವಿ ಗ್ರಾಮದ ಭಕ್ತರು ೫ ಕ್ವಿಂಟಲ್ ಜಿಲೇಬಿ ಹಾಗೂ ರೊಟ್ಟಿ ಸಮರ್ಪಿಸಿದರು.
ಕನ್ನಡಪ್ರಭ ವಾರ್ತೆ ತೇರದಾಳ (ರ-ಬ)
ತಾಲೂಕಿನ ಗೋಲಬಾವಿ ಗ್ರಾಮದ ಭಕ್ತರು ಅನ್ನಪ್ರಸಾದ ವಿತರಣೆಗೆ ೫ ಕ್ವಿಂಟಲ್ ಜಿಲೇಬಿ ನೀಡುವ ಮೂಲಕ ತಮ್ಮ ಭಕ್ತಿ ಮೆರೆದರುಪಟ್ಟಣದ ಆರಾಧ್ಯ ದೈವ ಅಲ್ಲಮಪ್ರಭು ದೇವರ ನೂತನ ದೇವಸ್ಥಾನ ಲೋಕಾರ್ಪಣೆ ಅಂಗವಾಗಿ ಜರುಗುತ್ತಿರುವ ಬಸವ ಪುರಾಣ ಮಂಗಲದ ಬಳಿಕ ಭಕ್ತರಿಗೆ ವಿತರಣೆಯಾಗುವ ಅನ್ನಪ್ರಸಾದಕ್ಕೆ ದಿನಕ್ಕೊಂದು ಭಕ್ಷ್ಯವನ್ನು ಭಕ್ತರು ತಯಾರಿಸಿ ನೀಡುತ್ತಾರೆ. ದವಸ-ದಾನ್ಯ ಅಥವಾ ಹಣದ ರೂಪದಲ್ಲಿ ದೇಣಿಗೆ ನೀಡುತ್ತಾ ಬಂದಿದ್ದು ೧೬ನೇ ದಿನವಾದ ಮಂಗಳವಾರ ಗೋಲಬಾವಿ ಭಕ್ತರು ದೇಣಿಗೆ ಸಂಗ್ರಹಿಸಿ ೫ ಕ್ವಿಂಟಲ್ ಜಿಲೇಬಿ ಹಾಗೂ ರೊಟ್ಟಿ ಸಂಗ್ರಹಿಸಿ ₹೩ ಲಕ್ಷ ಹಣವನ್ನು ದೇವಸ್ಥಾನ ಲೋಕಾರ್ಪಣೆ ಸಮಿತಿಗೆ ಸಮರ್ಪಿಸಿ ಭಕ್ತಿ ಮೆರೆದರು. ಜಿಲೇಬಿ ಬುತ್ತಿಯನ್ನು ಭಕ್ತರು ತಮ್ಮ ತಲೆ ಮೇಲೆ ಹೊತ್ತು ಅಂದಾಜು ಆರು ಕಿ.ಮೀ ದೂರ ಕಾಲ್ನಡಿಗೆಯಲ್ಲಿಯೇ ಬಂದು ದೇವಸ್ಥಾನ ತಲುಪಿದರು. ಗ್ರಾಮದ ಮುಖಂಡರು, ಮಾತೆಯರು, ಯುವಕರು ಇದ್ದರು.