ಸಾರಾಂಶ
ಸರ್ಕಾರದಿಂದ ಬಿಡುಗಡೆಯಾದ ಬರ ಪರಿಹಾರವನ್ನು ಯಾವುದೇ ಕಾರಣಕ್ಕೂ ಬ್ಯಾಂಕ್ಗಳು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಬುಧವಾರ ಆದೇಶ ಹೊರಡಿಸಿದ್ದಾರೆ.
ಧಾರವಾಡ : ಸರ್ಕಾರದಿಂದ ಬಿಡುಗಡೆಯಾದ ಬರ ಪರಿಹಾರವನ್ನು ಯಾವುದೇ ಕಾರಣಕ್ಕೂ ಬ್ಯಾಂಕ್ಗಳು ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಬುಧವಾರ ಆದೇಶ ಹೊರಡಿಸಿದ್ದಾರೆ.
ಧಾರವಾಡ ಜಿಲ್ಲೆಯ ರೈತ ಬ್ಯಾಂಕ್ ಖಾತೆಗಳಿಗೆ ಬರ ಪರಿಹಾರ ಮೊತ್ತವು ಸರ್ಕಾರದಿಂದ ನೆರವಾಗಿ ಡಿಬಿಟಿ ಮೂಲಕ ಸಂದಾಯವಾಗುತ್ತದೆ. ಈ ಮೊತ್ತವನ್ನು ಯಾವುದೇ ಕಾರಣಕ್ಕೂ ಸಾಲದ ಖಾತೆಗೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಎಲ್ಲ ಬ್ಯಾಂಕ್ಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಆದೇಶಿಸಿದ್ದಾರೆ.