ಸಿದ್ಧಾರೂಢರ ಸನ್ನಿಧಿಯಲ್ಲಿ ಸಂಸ್ಕೃತಿ ಅನಾವರಣ!ಕಾರ್ತಿಕೋತ್ಸವಕ್ಕೆ ರಾಜ್ಯ, ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಧರ್ಮ, ಜಾತಿ, ಭೇದವಿಲ್ಲದೆ ಆಗಮಿಸಿ ವಿವಿಧ ಸೇವಾ ಕಾರ್ಯ ಕೈಗೊಳ್ಳುತ್ತಾರೆ. ಅದರಂತೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಹೊಳಲು ಗ್ರಾಮದ ಚೆನ್ನಬಸಪ್ಪ ನೆಗಳೂರ 20 ವರ್ಷದಿಂದ ಶ್ರೀಮಠದ ಆವರಣದಲ್ಲಿ ಬಣ್ಣ-ಬಣ್ಣದ ಚಿತ್ತಾರ ಬಿಡಿಸಿ ಅಜ್ಜನಿಗೆ ತಮ್ಮ ಅಳಿಲು ಸೇವೆ ಸಲ್ಲಿಸುತ್ತಿದ್ದಾರೆ.