ಗಲ್ಲಿ, ಹಳ್ಳಿಗಳಲ್ಲಿ ಜೋಕುಮಾರಸ್ವಾಮಿ ಪುಂಡಾಟಿಕೆ ಶುರುಹುಟ್ಟಿದ ಏಳು ದಿನ ಕಂಡ ಕಂಡ ಮಹಿಳೆಯರಿಗೆ ಕಾಟ ಕೊಡುತ್ತ ಮೆರೆದಾಡುವ ಜೋಕುಮಾರ ಮನೆಯ ಬಾಗಿಲಿಗೆ ಬಂದಾಗ, ಊರಿನ ಮಹಿಳೆಯರು ಮರದ ತುಂಬಾ ದವಸ- ಧಾನ್ಯಗಳನ್ನು ತಂದು ಕೊಡುತ್ತಾರೆ. ಜತೆಗೆ, ಮನೆಯಲ್ಲಿರುವ ಸೊಳ್ಳೆ, ತಿಗಣೆಗಳು ಕ್ರಿಮಿಕೀಟಗಳು ಜೋಕುಮಾರನೊಂದಿಗೆ ಹೊರಟು ಹೋಗಲಿ ಎಂದು ಉಪ್ಪು, ಮೆಣಸಿನಕಾಯಿ, ಎಣ್ಣೆ-ಬೆಣ್ಣೆ, ಅಂಬಲಿ (ಹುಳಿನುಚ್ಚು) ನೀಡುವುದು ಸಂಪ್ರದಾಯ.