ಪ್ರತಿಯೊಬ್ಬರು ಪರಿಸರ ರಕ್ಷಣೆ ಜವಾಬ್ದಾರಿ ಹೊತ್ತು ತಪ್ಪದೆ ಗಿಡ ಮರಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಕೆಲಸ ಮಾಡಬೇಕಿದೆ. ಅಂದಾಗ ಮಾತ್ರ ಏರುತ್ತಿರುವ ತಾಪಮಾನದಿಂದ ಈ ಜಗತ್ತು, ನಮ್ಮ ಮುಂದಿನ ಪೀಳಿಗೆಯನ್ನು ರಕ್ಷಿಸಲು ಸಾಧ್ಯ ಎಂದು ಕಾಡಸಿದ್ದೇಶ್ವರ ಶ್ರೀಗಳು ಹೇಳಿದರು.