ಡಿಕೆಶಿ ಮೇಲಿನ ಸಿಬಿಐ ಪ್ರಕರಣ ವಾಪಸ್- ಸಚಿವ ಲಾಡ್ ಸಮರ್ಥನೆಕನ್ನಡಪ್ರಭ ವಾರ್ತೆ ಧಾರವಾಡಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಮೇಲಿನ ಸಿಬಿಐ ಪ್ರಕರಣ ವಾಪಸ್ ಪಡೆದಿರುವ ರಾಜ್ಯ ಸರ್ಕಾರದ ಪರ ನಿಲ್ಲುತ್ತೇನೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಗಳಿಗೆ ಈ ರೀತಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ. ಕ್ಯಾಬಿನೆಟ್ ಅಂದರೆ ಸರ್ಕಾರ ಇದ್ದಂತೆ. ಹೀಗಾಗಿ ಕ್ಯಾಬಿನೆಟ್ ನಿರ್ಣಯದ ಬಗ್ಗೆ ವಾದ-ವಿವಾದಗಳು ಸಾಮಾನ್ಯ. ಆದರೆ, ಸರ್ಕಾರ ತೆಗೆದುಕೊಂಡ ನಿರ್ಧಾರ ಅಂತಿಮ.