ಸಾರಾಂಶ
90ನೇ ಧವಸ ಭಂಡಾರ ನಾಪೋಕ್ಲು ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಭಗವತಿ ಕಲ್ಯಾಣ ಮಂಟಪದಲ್ಲಿ ಧವಸ ಭಂಡಾರದ ಅಧ್ಯಕ್ಷರಾಗಿರುವ ಕಂಗಾಂಡ ಜಾಲಿ ಪೂವಪ್ಪ ಅಧ್ಯಕ್ಷತೆಯಲ್ಲಿ ಜರುಗಿತು.
ಕನ್ನಡಪ್ರಭ ವಾರ್ತೆ ನಾಪೋಕ್ಲು
90 ನೇ ಧವಸ ಭಂಡಾರ ನಾಪೋಕ್ಲು ಇದರ 2024- 25ನೇ ಸಾಲಿನ ವಾರ್ಷಿಕ ಮಹಾಸಭೆ ಭಗವತಿ ಕಲ್ಯಾಣ ಮಂಟಪದಲ್ಲಿ ಧವಸ ಭಂಡಾರದ ಅಧ್ಯಕ್ಷರಾಗಿರುವ ಕಂಗಾಂಡ ಜಾಲಿ ಪೂವಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿತು.ಸಭೆಯಲ್ಲಿ ಧವಸ ಭಂಡಾರ ಅಭಿವೃದ್ಧಿ ಬಗ್ಗೆ ಚರ್ಚಿಸಿ ಒಮ್ಮತದ ನಿರ್ಧಾರಗಳನ್ನು ಕೈಗೊಳ್ಳಲಾಯಿತು ಹಾಗೂ ಲೆಕ್ಕಪತ್ರಗಳನ್ನು ಸಭೆಗೆ ಮಂಡಿಸಿ ಅನುಮೋದನೆ ಪಡೆದುಕೊಳ್ಳಲಾಯಿತು.
ಸಭೆಯಲ್ಲಿ ಉಪಸ್ಥಿತರಿದ್ದ ಉದಯಶಂಕರ್, ಅಶೋಕ. ಅಂಬಿ ಕಾರ್ಯಪ್ಪ, ರಘು ಕರುಂಬಯ್ಯ, ಹಿರಿಯರಾದ ಕಾವೇರಪ್ಪ ಸಂಸ್ಥೆಯ ಶ್ರೇಯೋಭಿವೃದ್ಧಿಯ ಬಗ್ಗೆ ಚರ್ಚಿಸಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಧವಸ ಭಂಡಾರದ ಉಪಾಧ್ಯಕ್ಷ ಶಿವಚಳಿಯಂಡ ಕಿಶೋರ್ ಬೋಪಣ್ಣ, ನಿರ್ದೇಶಕರಾದ ಶಿವಚಳಿಯಂಡ ಸುಭಾಷ್ ಸೋಮಯ್ಯ, ರಾಜೇಶ್ ತಮ್ಮಯ್ಯ, ಪಡಿಯಮ್ಮಂಡ ಮನು ಮಹೇಶ್, ಅರೆಯಡ ವಿನೋದ್, ಅಶೋಕ, ಬೊಪ್ಪಂಡ ಕಾಳಪ್ಪ, ಅಜ್ಜೇಟ್ಟೀರ ರಾಣಿ, ಕುಂಬಂಡ ಚಿತ್ರಾ, ಕಾರ್ಯದರ್ಶಿ ಕುಂಬಂಡ ಕೇಶವ ಉಪಸ್ಥಿತರಿದ್ದರು.