ಮಂಗನಕಾಯಿಲೆಗೆ ಬಲಿ ಆದವರಿಗೆ ಪರಿಹಾರ ಬಗ್ಗೆ ಸಿಎಂ ಜತೆ ಚರ್ಚೆ: ಸಚಿವ ದಿನೇಶ್‌ ಗುಂಡೂರಾವ್‌

| Published : Feb 20 2024, 01:47 AM IST

ಮಂಗನಕಾಯಿಲೆಗೆ ಬಲಿ ಆದವರಿಗೆ ಪರಿಹಾರ ಬಗ್ಗೆ ಸಿಎಂ ಜತೆ ಚರ್ಚೆ: ಸಚಿವ ದಿನೇಶ್‌ ಗುಂಡೂರಾವ್‌
Share this Article
  • FB
  • TW
  • Linkdin
  • Email

ಸಾರಾಂಶ

ಮಂಗನ ಕಾಯಿಲೆಯಿಂದ ಮೃತಪಟ್ಟವರ ಕುಟುಂಬಕ್ಕೆ ಈ ಹಿಂದೆ ಪರಿಹಾರ ನೀಡಿರುವ ಹಿನ್ನೆಲೆಯಲ್ಲಿ ಈಗ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ವಿಧಾನಸಭೆ ಅಧಿವೇಶನದಲ್ಲಿ ಭರವಸೆ ನೀಡಿದ್ದಾರೆ. ಶೂನ್ಯವೇಳೆಯಲ್ಲಿ ಬಿಜೆಪಿಯ ಡಿ.ಎಸ್‌. ಅರುಣ್‌ ಅವರು ಈ ಕುರಿತು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಈ ಹಿಂದೆ ಮಂಗನ ಕಾಯಿಲೆಯಿಂದ ಸಾವಿಗೀಡಾದ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡಿರುವ ಬಗ್ಗೆ ಪರಿಶೀಲಿಸುವ ಜತೆಗೆ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.

ಕನ್ನಡಪ್ರಭ ವಾರ್ತೆ ವಿಧಾನ ಪರಿಷತ್ತು

ಮಂಗನ ಕಾಯಿಲೆಯಿಂದ ಮೃತಪಟ್ಟವರ ಕುಟುಂಬಕ್ಕೆ ಈ ಹಿಂದೆ ಪರಿಹಾರ ನೀಡಿರುವ ಹಿನ್ನೆಲೆಯಲ್ಲಿ ಈಗ ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ, ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಭರವಸೆ ನೀಡಿದರು.ಶೂನ್ಯವೇಳೆಯಲ್ಲಿ ಬಿಜೆಪಿಯ ಡಿ.ಎಸ್‌. ಅರುಣ್‌ ಅವರು ಈ ಕುರಿತು ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಅವರು, ಈ ಹಿಂದೆ ಮಂಗನ ಕಾಯಿಲೆಯಿಂದ ಸಾವಿಗೀಡಾದ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡಿರುವ ಬಗ್ಗೆ ಪರಿಶೀಲಿಸುವ ಜತೆಗೆ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ಪರಿಹಾರ ಒದಗಿಸಲು ಕ್ರಮ ಜರುಗಿಸಲಾಗುವುದು ಎಂದರು.

ಸದ್ಯ ಈ ಕಾಯಿಲೆ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿದೆ. ಈ ಕಾಯಿಲೆಗೆ ಚಿಕಿತ್ಸೆ ನೀಡಲು ಬಳಸುತ್ತಿದ್ದ ಲಸಿಕೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಬೇಸಿಗೆಯಲ್ಲಿ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಮಳೆಗಾಲದಲ್ಲಿ ಈ ಕಾಯಿಲೆ ಕಂಡು ಬರುವುದಿಲ್ಲ. ಲಸಿಕೆ ಇದ್ದರೂ ಬಳಸಲು ಬರುವುದಿಲ್ಲ. ಹೊಸ ಲಸಿಕೆ ಕಂಡು ಹಿಡಿಯಲು ಹೈದರಾಬಾದ್‌ ಕಂಪನಿಗೆ ಸೂಚಿಸಲಾಗಿದೆ. ಹೀಗಾಗಿ ಸದ್ಯ ಹೊಸ ಲಸಿಕೆ ಲಭ್ಯವಿಲ್ಲ, ಕಳೆದ ಅಕ್ಟೋಬರ್‌ ತಿಂಗಳಿಂದ ಜನರಲ್ಲಿ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸಲು ಆರಂಭಿಸಲಾಗಿದೆ ಎಂದರು.