ಸಾರಾಂಶ
ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳಿಗೆ ಯಾವುದೇ ಕೊರತೆಯಿಲ್ಲ. ಅವುಗಳು ಅಗತ್ಯ ವಸ್ತು ಕಾಯ್ದೆಯಡಿ ಬರುವುದರಿಂದ ಅವುಗಳನ್ನು ಪಾರದರ್ಶಕವಾಗಿ ಮತ್ತು ಸಮರ್ಪಕವಾಗಿ ಸಮಗ್ರ ಪೋಷಕಾಂಶಗಳ ಬಳಕೆ ಬಗ್ಗೆ ರೈತರಿಗೆ ಒತ್ತು ನೀಡಿ.
ಕನ್ನಡಪ್ರಭ ವಾರ್ತೆ ಮದ್ದೂರು
ಪ್ರಸಕ್ತ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದೆ. ರೈತರು ಭೂಮಿ ಸಿದ್ಧತೆ ಕಾರ್ಯದಲ್ಲಿ ತೊಡಗಿದ್ದಾರೆ. ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕೀಟನಾಶಕ ಮಾರಾಟಗಾರರು ಗುಣಮಟ್ಟದ ಕೃಷಿ ಪರಿಕರ ಮಾರಾಟ ಮಾಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ವಿ.ಎಸ್.ಅಶೋಕ್ ಸೂಚನೆ ನೀಡಿದರು.ಪಟ್ಟಣದ ಕೃಷಿ ನಿರ್ದೇಶಕರ ಕಚೇರಿಯಲ್ಲಿ 2024-25ನೇ ಸಾಲಿನ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕ ಮಾರಾಟಗಾರರಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಾಲೂಕಿನಲ್ಲಿ ಮುಂಗಾರು ಚುರುಕುಗೊಂಡಿದೆ. ರೈತರು ಜಮೀನುಗಳನ್ನು ಬಿತ್ತನೆ ಕಾರ್ಯಕ್ಕೆ ಸಿದ್ಧಗೊಳಿಸಿ ವಿವಿಧ ಬಿತ್ತನೆ ಬೀಜಗಳು ಹಾಗೂ ರಸಗೊಬ್ಬರ ಖರೀದಿಯಲ್ಲಿ ತೊಡಗಿದ್ದಾರೆ ಎಂಜದರು.
ರೈತರಿಗೆ ಅವಶ್ಯಕವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆಯಾಗದಂತೆ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳಿಗೆ ಯಾವುದೇ ಕೊರತೆಯಿಲ್ಲ. ಅವುಗಳು ಅಗತ್ಯ ವಸ್ತು ಕಾಯ್ದೆಯಡಿ ಬರುವುದರಿಂದ ಅವುಗಳನ್ನು ಪಾರದರ್ಶಕವಾಗಿ ಮತ್ತು ಸಮರ್ಪಕವಾಗಿ ಸಮಗ್ರ ಪೋಷಕಾಂಶಗಳ ಬಳಕೆ ಬಗ್ಗೆ ರೈತರಿಗೆ ಒತ್ತು ನೀಡಿ ಮಾರಾಟ ಮಾಡುವುದರ ಜೊತೆಗೆ ಇಲಾಖೆಗೆ ವಹಿವಾಟಿನ ವರದಿಯನ್ನು ಕಾಲಕಾಲಕ್ಕೆ ಸಲ್ಲಿಸುವಂತೆ ಸೂಚಿಸಿದರು.ಕೃಷಿ ಇಲಾಖೆ ಉಪನಿರ್ದೇಶಕಿ ಕೆ.ಮಾಲತಿ ಮಾತನಾಡಿ, ಋತುಮಾನಕ್ಕೆ ಹಾಗೂ ತಾಲೂಕಿಗೆ ಸೂಕ್ತವಾದ ಮತ್ತು ಪರವಾನಗಿಯಲ್ಲಿ ಧೃಡಿಕರಿಸಲ್ಪಟ್ಟ ಅಧಿಕ ಇಳುವರಿ ಭತ್ತದ ತಳಿಗಳನ್ನು ಮಾತ್ರ ಮಾರಾಟ ಮಾಡಬೇಕು. ರಸಗೊಬ್ಬರ ಮಾರಾಟದಲ್ಲಿ ಕೃತಕ ಅಭಾವ ಸೃಷ್ಟಿಸದಂತೆ ಎಚ್ಚರವಹಿಸಬೇಕು. ರೈತರಿಗೆ ರಸೀದಿ ನೀಡಿ ಮಾರಾಟ ಮಾಡಬೇಕು ಎಂದರು.
ಕೃಷಿ ನಿರ್ದೇಶಕ ಪರಮೇಶ್ ರೈತರು ಅಧಿಕೃತ ಲೈಸೆನ್ಸ್ ಹೊಂದಿದ ರಸಗೊಬ್ಬರ ಮಾರಾಟಗಾರರಿಂದ ಮಾತ್ರ ಖರೀದಿ ಮಾಡಬೇಕು ಹಾಗೂ ತಾಲೂಕಿನ ವಿವಿಧ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳನ್ನು ವಿತರಿಸುತ್ತಿದೆ. ರೈತರ ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.ಇದೇ ವೇಳೆ ಕೃಷಿ ಅಧಿಕಾರಿಗಳಾದ ರೂಪಶ್ರೀ, ದಯಾನಂದ್, ಭವಾನಿ, ಕೃಷ್ಣೇಗೌಡ, ಕರುಣ, ಕೆಂಪೇಗೌಡ, ಶೈಲಜಾ, ಇಪ್ಕೋ ಸಂಸ್ಥೆ ಡ್ರೋನ್ ತಂತ್ರಜ್ಞ ಧನರಾಜ್ ಸೇರಿದಂತೆ ಇತರರಿದ್ದರು.