ಸಾರಾಂಶ
ಸಾಧನ ಸಲಕರಣೆಗಳನ್ನು ಪಡೆದಿರುವ ಮಕ್ಕಳು ಅವುಗಳ ದುರುಪಯೋಗ ಪಡಿಸಿಕೊಳ್ಳದೆ ಸದುಪಯೋಗ ಪಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ಇಂಡಿ
ವಿಶೇಷ ಅಗತ್ಯವುಳ್ಳ ಮಕ್ಕಳ ಸಾಧನೆ, ಸಲಕರಣೆ ಸದುಪಯೋಗ ಪಡಿಸಿಕೊಳ್ಳಬೇಕೆಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಗುರುವಾರ ಪಟ್ಟಣದ ಗುರುಭವನದಲ್ಲಿ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಂಡಿದ್ದ ವಿಕಲಚೇತನ ಮಕ್ಕಳ ಸಾಧನ ಸಲಕರಣೆಗಳ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಾಧನ ಸಲಕರಣೆಗಳನ್ನು ಪಡೆದಿರುವ ಮಕ್ಕಳು ಅವುಗಳ ದುರುಪಯೋಗ ಪಡಿಸಿಕೊಳ್ಳದೆ ಸದುಪಯೋಗ ಪಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.ಬಿಇಒ ಟಿ.ಎಸ್. ಆಲಗೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರಸಮನ್ವಯಾಧಿಕಾರಿ ಎಸ್.ಆರ್. ನಡುಗಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾವೇದ್ ಮೋಮಿನ್, ಡಿಡಿಪಿಐ ಕಚೇರಿ ನೋಡಲ್ ಅಧಿಕಾರಿ ಸಂಭಾಜಿ, ಜಿ.ಕೆ. ಪಾಟೀಲ, ಯಮುನಾಜಿ ಸಾಳುಂಕೆ ಇತತರು ಇದ್ದರು.
84 ಮಕ್ಕಳಿಗೆ ಉಚಿತ ಸಾಧನ,ಸಲಕರಣೆಗಳನ್ನು ವಿತರಣೆ ಮಾಡಲಾಯಿತು.