ಸಾರಾಂಶ
ಮಸಗೋಡು ಗ್ರಾಮದ ಸಮುದಾಯ ಭವನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ 50, 000 ರು. ಮೊತ್ತದ ಡಿಡಿ ಮತ್ತು ಮಂಜೂರಾತಿ ಪತ್ರವನ್ನು ಆಡಳಿತ ಮಂಡಳಿಗೆ ಹಸ್ತಾಂತರಿಸಲಾಯಿತು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಸಮೀಪದ ಮಸಗೋಡು ಗ್ರಾಮದ ಸಮುದಾಯ ಭವನ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ 50, 000 ರು. ಮೊತ್ತದ ಡಿ.ಡಿ ಮತ್ತು ಮಂಜೂರಾತಿ ಪತ್ರವನ್ನು ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಅವರು ಆಡಳಿತ ಮಂಡಳಿಗೆ ಹಸ್ತಾಂತರಿಸಿದರು. ನಂತರ ಮಾತನಾಡಿ, ಕ್ಷೇತ್ರದಿಂದ ಪೂಜ್ಯರು ಧರ್ಮೋತ್ಥಾನ ಟ್ರಸ್ಟ್ಗಳನ್ನು ಮಾಡಿ ಸಮಾಜಮುಖಿಯಾಗಿ ರಾಜ್ಯಾದ್ಯಂತ ದೇವಸ್ಥಾನ, ಸಮುದಾಯಭವನ ಹಾಗೂ ಹಾಲು ಉತ್ಪಾದಕರ ಘಟಕಗಳ ಅಭಿವೃದ್ಧಿಗಾಗಿ ಆರ್ಥಿಕ ನೆರವನ್ನು ನೀಡುತ್ತಿದ್ದಾರೆ. ಇದರೊಂದಿಗೆ ಹತ್ತು ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜನರಿಗೆ ಸಹಕಾರ ನೀಡುತ್ತಿದ್ದಾರೆ ಎಂದರು. ಈ ಸಂದರ್ಭ ನೇರುಗಳಲೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಲಾ ದಿನೇಶ್, ತಾಲ್ಲೂಕಿನ ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಗ್ರಾಮ ಸಮಿತಿ ಅದ್ಯಕ್ಷ ಸತೀಶ್, ಜಿಲ್ಲಾ ಜನಜಾಗೃತಿ ಸದಸ್ಯ ಸುರೇಶ್, ಒಕ್ಕೂಟ ಅಧ್ಯಕ್ಷೆ ರೂಪಾ ಸುರೇಶ್ ಹಾಗೂ ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು.