ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಕುಶಾಲನಗರ ತಾಲೂಕಿನ ಸುಂಟಿಕೊಪ್ಪದಲ್ಲಿ ಮೇ 29 ಮತ್ತು 30ರಂದು ಜರುಗಲಿದೆ. ಈ ಸಂದರ್ಭ ಸಾಹಿತ್ಯಕ್ಕೆ ಸಂಬಂಧಿಸಿದಂತೆ ಹಲವಾರು ವಿಚಾರಗೋಷ್ಠಿಗಳು ಗೀತ ಗಾಯನ ಕವಿಗೋಷ್ಠಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಕವನ ವಾಚಿಸಲು ಆಸಕ್ತರಾಗಿರುವ ಕವಿ/ ಕವಿಯತ್ರಿಯರಿಂದ ಸ್ವರಚಿತ ಕವನಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಕವಿ/ ಕವಿಯಿತ್ರಿಯರು ಕನ್ನಡ ಭಾಷೆಯ ಒಂದು ಕವನವನ್ನು ಈ ಕೆಳಗೆ ಸೂಚಿಸಿದ ವಿಳಾಸಕ್ಕೆ ಮೇ 3ರೊಳಗಾಗಿ ಕಳಹಿಸಿಕೊಡಬೇಕು. ಆ ನಂತರ ಬರುವ ಕವನಗಳನ್ನು ಪರಿಗಣಿಸಲಾಗುವುದಿಲ್ಲ. ಕವನವು 16 ಗೆರೆಗಳಿಗೆ ಸೀಮಿತವಾಗಿರಬೇಕು.

ಕನ್ನಡ ಭಾಷೆಯ ಚುಟುಕು ಕವನ (4 ಸಾಲಿನ ಗರಿಷ್ಠ 4 ಕವನಗಳಿಗೆ ಮಾತ್ರ ಅವಕಾಶ)ಗಳು.ವಿಶೇಷವಾಗಿ ಮಕ್ಕಳ ಕವನ (6ರಿಂದ 13 ವರ್ಷ ಒಳಪಟ್ಟವರು)ಗಳಿಗೂ ಅವಕಾಶ ಕಲ್ಪಿಸಲಾಗಿದೆ. ಕವನಗಳನ್ನು ಕಳುಹಿಸುವವರು ತಮ್ಮ ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ಭಾವಚಿತ್ರವನ್ನು ತಪ್ಪದೆ ಕಳುಹಿಸಿಕೊಡಬೇಕು. ಮಾಹಿತಿಗಳಿಲ್ಲದ ಕವನಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಕವನಗಳನ್ನು ಮತ್ತು ಮಾಹಿತಿಯನ್ನು ಈ ಕೆಳಗೆ ಸೂಚಿಸಿದ ವ್ಯಾಟ್ಸಾಪ್- ಇಮೇಲ್ ಮೂಲಕ ಕಳುಹಿಸಬಹುದು. ಕವನಗಳನ್ನು ಟೈಪ್ ಮಾಡಿ ಕಳುಹಿಸಬೇಕು. ವಾಟ್ಸಾಪ್ ಅಥವಾ ಇಮೇಲ್ ನಲ್ಲಿ ಕವನದ ಛಾಯಾ ಪ್ರತಿಯನ್ನು ಕಳುಹಿಸಿದರೆ ಅದನ್ನು ಪರಿಗಣಿಸಲಾಗುವುದಿಲ್ಲ.

ವಾಟ್ಸಾಪ್ ಅಥವಾ ಇಮೇಲ್ ಸೌಲಭ್ಯ ಇಲ್ಲದಿರುವವರು ಅಂಚೆ ಮೂಲಕ ಈ ವಿಳಾಸಕ್ಕೆ ಅಗತ್ಯ ಮಾಹಿತಿಯೊಂದಿಗೆ ಕಳುಹಿಸಿಕೊಡಬಹುದು.ಕವನ ಕಳುಹಿಸಬೇಕಾದ ವಿಳಾಸ: ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಂಬೇಡ್ಕರ್ ಭವನದ ಬಳಿ,ಸುದರ್ಶನ್ ವೃತ್ತ, ಮಡಿಕೇರಿ - 571201 ಮೊಬೈಲ್ ಸಂಖ್ಯೆ : 9113892396,8762348999. ಇಮೇಲ್ ಅಡ್ರೆಸ್ dineshbc90@gmail.com &vinodmb5575@gmail.com ಎಂದು 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಪಿ.ಎಫ್. ಸಭಾಸ್ಟಿನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.