ಜಿ.ಪಂ. ನಿರ್ಗಮಿತ ಸಿ.ಇ.ಒ. ವರ್ಣೀತ್ ನೇಗಿ ಬೀಳ್ಕೊಡುಗೆ

| Published : Jul 14 2024, 01:34 AM IST

ಸಾರಾಂಶ

ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ವರ್ಣಿತ್ ನೇಗಿ ಅವರನ್ನು ವಿವಿಧ ಇಳಾಖೆಗಳಿಂದ ಸನ್ಮಾನಿಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲಾ‌ ಪಂಚಾಯಿತಿಯಲ್ಲಿ ಕಳೆದ 1 ವರ್ಷದಿಂದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ವರ್ಣಿತ್ ನೇಗಿ ಅವರಿಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಬೀಳ್ಕೊಡುಗೆ ನೀಡಲಾಯಿತು.

ಜಿಲ್ಲಾ ಪಂಚಾಯಿತಿಯ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ವರ್ಣಿತ್ ನೇಗಿ ಅವರನ್ನು ವಿವಿಧ ಇಳಾಖೆಗಳಿಂದ ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಾತನಾಡಿ ಜಿಲ್ಲೆಯ ಉತ್ತಮ ಆಡಳಿತಕ್ಕೆನೇಗಿ ಅವರಿ ತಂಡದ ಕೋಚ್ ರೀತಿ ಶ್ರಮಿಸಿದ್ದು , ಮಾತು ಕಡಿಮೆ ಕೆಲಸ ಜಾಸ್ತಿ ಎಂಬ ತತ್ವದ ಮೇಲೆ ಕೆಲಸ ನಿರ್ವಹಿಸಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಅವರ ಮುಂದಿನ ವೃತ್ತಿ ಜೀವನದಲ್ಲಿ ಸಾಕಷ್ಟು ಯಶಸ್ಸು ಸಿಗಲಿ ಎಂದು ಶುಭ ಕೋರಿದರು.ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ. ರಾಮಾರಾಜನ್‌ ಮಾತನಾಡಿ, ಸರ್ಕಾರಿ ಸೇವೆಯಲ್ಲಿ ವರ್ಗಾವಣೆ ಎಂಬುದು ನಿಶ್ಚಿತ ಕುಟುಂಬದ ಸದಸ್ಯರಂತೆ ಹಾಗೂ ಉತ್ತಮ ಸ್ನೇಹಿತರಾಗಿ ಕಳೆದ ಒಂದು ವರ್ಷದಿಂದ ಇದ್ದು ಇಂದು ವರ್ಗಾವಣೆಗೊಳ್ಳುತ್ತಿದ್ದು ಬಹಳ ಬೇಸರವನ್ನುಂಟು ಮಾಡಿದೆ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ಗಮಿತ ಜಿ.ಪಂ.ಸಿ.ಇ.ಒ ವರ್ಣೀತ್ ನೇಗಿ ಜಿಲ್ಲೆಯಲ್ಲಿ ಕೆಲಸ ಮಾಡಿದ್ದು ತೃಪ್ತಿಯನ್ನು ತಂದಿದೆ , ಪ್ರಾರಂಭಿಕ ದಿನಗಳಲ್ಲಿ ಸಾಕಷ್ಟು ಸವಾಲುಗಳು ಎದುರಾಯಿತು, ಕಾಲ ಕ್ರಮೇಣ ಎಲ್ಲ ಸರಿ ಹೊಂದಿ ಇಂದು ವರ್ಗಾವಣೆಗೊಂಡು ಹೋಗುತ್ತಿದ್ದೇನೆ. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಜಿಲ್ಲೆಯ ಇಲಾಖೆಗಳ ಅಭಿವೃದ್ದಿಗೆ ಶ್ರಮಿಸಿದ್ದೀರಿ ಎಲ್ಲರಿಗೂ ಹೃದಯಪೂರ್ವಕ ವಂದನೆಗಳು ಎಂದರು.

ಉಪ ವಿಭಾಗಾಧಿಕಾರಿಗಳಾದ ವಿನಾಯಕ ನರ್ವಾಡೆ, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್ ,ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.