ಕೆಂಪೇಗೌಡರ ಪ್ರತಿಮೆಗೆ ಡಿಕೆಶಿ ಪುಷ್ಪನಮನ

| Published : Jun 28 2025, 12:18 AM IST

ಸಾರಾಂಶ

ಕೆಂಪೇಗೌಡರು ಬೆಂಗಳೂರು ನಗರ ಕಟ್ಟದೇ ಹೋಗಿದ್ದರೆ ಇಂದು ನಾವು ಯಾರು ಕೂಡ ಬೆಂಗಳೂರಿನಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿರಲಿಲ್ಲ.

ಕನ್ನಡಪ್ರಭ ವಾರ್ತೆ ದೇವನಹಳ್ಳಿ

ನಾಡಪ್ರಭು ಕೆಂಪೇಗೌಡ ರವರ 516ನೇ ಜನ್ಮ ದಿನಾಚರಣೆಯ ಅಂಗವಾಗಿ ಶುಕ್ರವಾರ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನದ ನಿಲ್ದಾಣದ ಬಳಿ ಇರುವ ನಾಡಪ್ರಭು ಕೆಂಪೇಗೌಡ ಅವರ 118 ಅಡಿ ಎತ್ತರದ ಕಂಚಿನ ಪ್ರತಿಮೆಗೆ ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಪುಷ್ಪ ನಮನ ಸಲ್ಲಿಸಿದರು.

ಉಪ ಮುಖ್ಯಮಂತ್ರಿಗಳಾದ ಡಿ ಕೆ. ಶಿವಕುಮಾರ್ ಅವರು ಮಾತನಾಡಿ, ಇದು ಒಂದು ಐತಿಹಾಸಿಕ ದಿನ ಎಂದು ಹೇಳಬಹುದು. ಕೆಂಪೇಗೌಡರು ಬೆಂಗಳೂರು ನಗರ ಕಟ್ಟದೇ ಹೋಗಿದ್ದರೆ ಇಂದು ನಾವು ಯಾರು ಕೂಡ ಬೆಂಗಳೂರಿನಲ್ಲಿ ಜೀವನ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಬೇರೆ ರಾಜ್ಯಗಳಿಂದ ಹಳ್ಳಿಗಳಿಂದ ಜನರು ಕೆಲಸ ಹರಿಸುತ್ತ ಬೆಂಗಳೂರಿಗೆ ಬಂದು ಜೀವನ ನಡೆಸುತ್ತಿದ್ದಾರೆ. ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ ಎಂದರು.

ಐಟಿ ಬಿಟಿ ಕಂಪನಿಗಳ ತವರೆನಿಸಿಕೊಂಡಿದೆ. ಒಂದು ನದಿ ಮೂಲವು ಇಲ್ಲದ ಬೆಂಗಳೂರನ್ನು ವಿಶ್ವ ಮಟ್ಟದಲ್ಲಿ ಗುರುತಿಸುವಂತೆ ಮಾಡಿದರು. ಅವರ ಜ್ಞಾನದ ಮೂಲಕ ಹರಿದ ಅವರ ಶ್ರಮ ಇಂದಿಗೂ ಬೆಂಗಳೂರು ಉತ್ತಮ ಭೌಗೋಳಿಕ ಪ್ರದೇಶದಲ್ಲಿ ನಿರ್ಮಾಣವಾದ ನಗರವಾಗಿದೆ. ಅವರ ಆದರ್ಶ ಮೌಲ್ಯಗಳು ಚಿರಸ್ಥಾಯಿಯಾಗಿ ಉಳಿಯಬೇಕು ಎಂದರು.ಇದೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಬಯಪ್ಪ ಅಧ್ಯಕ್ಷ ಶಾಂತಕುಮಾರ್, ಸದಸ್ಯ ಪ್ರಸನ್ನಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ.ಮಂಜುನಾಥ್, ವಿಜಯಪುರ ಬ್ಲಾಕ್ ಅಧ್ಯಕ್ಷ ದಿನ್ನೊರ್ ವೆಂಕಟೇಶ್, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಇದ್ದರು.೨೭ ದೇವನಹಳ್ಳಿ ಚಿತ್ರಸುದ್ದಿ: ೧

ಕೆಂಪೇಗೌಡರ 516ನೇ ಜಯಂತಿ ಹಿನ್ನೆಲೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತಿತರು ಪ್ರತಿಮೆಗೆ ನಮನ ಸಲ್ಲಿಸಿದರು.