ದಾಖಲೀಕರಣದಿಂದ ಮುಂದಿನ ಪೀಳಿಗೆಗೆ ಸ್ಫೂರ್ತಿ: ಮೋಹನ್‌ದಾಸ್ ಕಾಮತ್

| Published : Aug 11 2025, 01:40 AM IST / Updated: Aug 11 2025, 01:41 AM IST

ಸಾರಾಂಶ

ಮಂಗಳೂರು ಪತ್ರಿಕಾ ಭವನದಲ್ಲಿ ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ’ ಇ-ಪೇಪರ್ ಇದರ ಆರನೇ ಸಂಚಿಕೆಯ ಬಿಡುಗಡೆ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ದಾಖಲೀಕರಣ ಕಾರ್ಯಕ್ಕೆ ತನ್ನದೇ ಆದ ಮಹತ್ವವಿದೆ .ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿರುವ ಸಂಘ, ಸಂಸ್ಥೆಗಳ ಸಾಧನೆ ಶಾಶ್ವತ ದಾಖಲೆಯಾಗಿ ಮೂಡಿಬಂದರೆ ಮುಂದಿನ ಪೀಳಿಗೆಗೆ ಸ್ಫೂರ್ತಿಯ ಸೆಲೆಯಾಗಲು ಸಾಧ್ಯವಿದೆ ಎಂದು ಅನಿವಾಸಿ ಭಾರತೀಯ ಎಂಜಿನಿಯರ್ ಮಂಜೇಶ್ವರ ಮೋಹನ್‌ದಾಸ್ ಕಾಮತ್ ಹೇಳಿದರು.ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಮಂಗಳೂರು ಪ್ರೆಸ್ ಕ್ಲಬ್‌ನ ಗೃಹ ಪತ್ರಿಕೆ ‘ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ’ ಇ-ಪೇಪರ್ ಇದರ ಆರನೇ ಸಂಚಿಕೆಯ ಬಿಡುಗಡೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನೂತನ ಸಂಚಿಕೆ ಲೋಕಾರ್ಪಣೆಗೊಳಿಸಿದ ಹಿರಿಯ ಪತ್ರಕರ್ತ ಬಿ.ರವೀಂದ್ರ ಶೆಟ್ಟಿ ಮಾತನಾಡಿ, ಪತ್ರಕರ್ತರಿಗೆ ಕಾನೂನಿನ ಮಾಹಿತಿ ಅವಶ್ಯವಾಗಿದ್ದು, ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಕಾನೂನುಗಳ ಬಗ್ಗೆ ಬೆಳಕು ಚೆಲ್ಲುವ ಲೇಖನಗಳನ್ನು ಪ್ರಕಟಿಸಲು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪ್ರೆಸ್ ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು ಇದ್ದರು.

ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಆರ್.ಸಿ.ಭಟ್ ನಿರೂಪಿಸಿದರು.

-------------