ಕನ್ನಡಪ್ರಭ ವಾರ್ತೆ ಬೆಳಗಾವಿ

ನಗರದ ಸಾರ್ವಜನಿಕ ಗ್ರಂಥಾಲಯದಲ್ಲಿ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ರಾಜ್ಯಾಧ್ಯಕ್ಷ ಡಾ.ಎಸ್.ಎಲ್.ಕಾಡದೇವರಮಠ ಹಾಗೂ ಎಲ್‌ಐಎಸ್ ಅಕಾಡೆಮಿ ಅಧ್ಯಕ್ಷ ಪ್ರೊ.ಪಿ.ವಿ.ಕೊಣ್ಣೂರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಬೆಳಗಾವಿ ಜಿಲ್ಲಾ ವಿಭಾಗಕ್ಕೆ ಪದಾಧಿಕಾರಿಗಳು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಅಧ್ಯಕ್ಷರಾಗಿ ಡಾ.ಭರತ ಭೀ.ಅಲಸಂದಿ, ಉಪಾಧ್ಯಕ್ಷರಾಗಿ ಡಾ.ರಮೇಶ ಕುರಿ ಹಾಗೂ ರವಿ ಡಿ.ಶಿವನಾಯ್ಕರ, ಕಾರ್ಯದರ್ಶಿಯಾಗಿ ಕಿರಣ ಮಾಳೋದೆ,

ಸಂಘಟನಾ ಕಾರ್ಯದರ್ಶಿಗಳಾಗಿ ಪ್ರಕಾಶ್, ಖಜಾಂಚಿಯಾಗಿ ಡಾ.ಸುಮನ್ ಮುದ್ದಾಪುರ, ಗವರ್ನಿಂಗ್ ಕೌನ್ಸಿಲ್ ಸದಸ್ಯರಾಗಿ ಡಾ.ರಾಮಯ್ಯ, ಸುಪ್ರೀತ್ ಸಕತ್, ಡಾ.ಅಶ್ವಿನಿ ಲಟ್ಟೆ, ಭೀಮಪ್ಪ, ತಾಯಪ್ಪ ಆಡಿನ, ಡಾ.ವೇಣುಗೋಪಾಲ ಹಜ್ಜೆ, ಆಹ್ವಾನಿತರಾಗಿ ಡಾ.ರಾಜು ಗಡಾದ, ರಮೇಶ.ಸಿ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ಪದಾಧಿಕಾರಿಗಳಿಗೆ ರಾಜ್ಯಾಧ್ಯಕ್ಷ ಡಾ.ಎಸ್.ಎಲ್.ಕಾಡದೇವರಮಠ, ಎಲ್‌ಐಎಸ್ ಅಕಾಡೆಮಿ ಅಧ್ಯಕ್ಷ ಡಾ.ಪಿ.ವಿ.ಕೊಣ್ಣೂರ ಅವರು ಅಭಿನಂದನೆ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘ ನೋಂದಣಿಯಾದ ರಾಜ್ಯಮಟ್ಟದ ಸಂಘಟನೆ,ಯಾಗಿದ್ದು, ಗ್ರಂಥಾಲಯಗಳು, ಗ್ರಂಥಪಾಲಕರ ಮತ್ತು ಗ್ರಂಥಾಲಯ ಮಾಹಿತಿ ವಿಜ್ಞಾನದ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ.ರಾಜ್ಯದ ಪ್ರತಿ ಜಿಲ್ಲೆಗಳಲ್ಲಿ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ಜಿಲ್ಲಾ ವಿಭಾಗಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಗ್ರಂಥಾಲಗಳ ಅಭಿವೃದ್ಧಿಗೆ ಪೂರಕವಾಗುವ ಕಾರ್ಯಯೋಜನೆ ಹಾಕಿಕೊಳ್ಳಲಾಗಿದೆ. ಈಗಾಗಲೇ 17 ಜಿಲ್ಲೆಗಳಲ್ಲಿ ಪದಾಧಿಕಾಗಳನ್ನು ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಜಿಲ್ಲೆಗಳಿಗೆ ನೇಮಕ ಮಾಡಲಾಗುವುದು. ನ.14 ರಿಂದ 20 ರವರೆಗೆ ಗ್ರಂಥಾಲಯ ಸಪ್ತಾಯ ಸೇರಿದಂತೆ ಗ್ರಂಥಾಲಯ ಪಿತಾಮಹ ಜನ್ಮ ದಿನ ನಿಮಿತ್ತ ಗ್ರಂಥಾಲಯ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುವುದು. ಇದಕ್ಕೆ ಪೂರಕವಾಗಿ ಪದಾಧಿಕಾರಿಗಳು


ಕಾರ್ಯಕ್ರಮ ಆಯೋಜಿಸಿ ಸಂಘದ ಕಾರ್ಯ ಯೋಜನೆಗಳನ್ನು ಯಶಸ್ವಿಗೊಳಿಸಬೇಕು.

-ಡಾ.ಎಸ್.ಎಲ್.ಕಾಡದೇವರಮಠ, ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘದ ರಾಜ್ಯಾಧ್ಯಕ್ಷರು.

ಗ್ರಂಥಾಲಯ ಪಿತಾಮಹ ಡಾ.ಎಸ್‌.ಆರ್‌.ರಂಗನಾಥನ್‌ 61 ವರ್ಷಗಳ ಹಿಂದೆ ಪ್ರಾರಂಭಿಸಿದ ಕರ್ನಾಟಕ ರಾಜ್ಯ ಗ್ರಂಥಾಲಯ ಸಂಘವು ಇಲ್ಲಿಯವರೆಗೆ ಬೆಂಗಳೂರು ನಗರಕ್ಕೆ ಸಿಮೀತವಾಗಿತ್ತು. ಡಾ.ಎಸ್‌.ಎಲ್‌.ಕಾಡದೇವರಮಠ ಅಧ್ಯಕ್ಷತೆಯಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಿಗೂ ಸಂಘದ ಚಟುವಟಿಕೆಗಳನ್ನು ಕೊಂಡ್ಯೋಯುವ ಕಾರ್ಯವು ಶ್ಲಾಘನೀಯವಾಗಿದೆ. ಗ್ರಂಥಾಲಯಗಳ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳು ನಡೆಯುವ ಮೂಲಕ ಓದುವ ಬಳಗವನ್ನು ದ್ವಿಗುಣಗೊಳಿಸಲಿದೆ.

-ಡಾ.ಪಿ.ವಿ.ಕೊಣ್ಣೂರ,

ಎಲ್‌ಐಎಸ್ ಅಕಾಡೆಮಿ ಅಧ್ಯಕ್ಷರು.