ಸಾರಾಂಶ
ವಾರಣಾಸಿಯ ಅಖಿಲ ಭಾರತೀಯ ವಿದ್ವತ್ ಪರಿಷತ್ನ ರಜತ ಮಹೋತ್ಸವ ಅಂಗವಾಗಿ ನ. 8/9 ರಂದು ಎರಡು ದಿನಗಳ ರಾಷ್ಟ್ರೀಯ - ಶೋಧ ಸಂಗೋಷ್ಠಿ ಹಾಗೂ ವಿದ್ವತ್ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ಉಡುಪಿ
ವಾರಣಾಸಿಯ ಅಖಿಲ ಭಾರತೀಯ ವಿದ್ವತ್ ಪರಿಷತ್ನ ರಜತ ಮಹೋತ್ಸವ ಅಂಗವಾಗಿ ನ. 8/9 ರಂದು ಎರಡು ದಿನಗಳ ರಾಷ್ಟ್ರೀಯ - ಶೋಧ ಸಂಗೋಷ್ಠಿ ಹಾಗೂ ವಿದ್ವತ್ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿತ್ತು.ನೇಪಾಳದ ಜಗದ್ಗುರು ಶ್ರೀ ಶಂಕರಾಚಾರ್ಯ ಹೇಮಾನಂದಗಿರಿಜೀ ಹಾಗೂ ಜಗದ್ಗುರು ನಿಂಬಾರ್ಕ ಸಂಪ್ರದಾಯ ಪರಂಪರೆಯ ಶ್ರೀ ಪದ್ಮನಾಭ ಶರಣ್ ದೇವ್ ಮಹಾರಾಜ್ ಅವರ ಸಾನ್ನಿಧ್ಯದಲ್ಲಿ ಬಿಹಾರದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಉಡುಪಿಯ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ದ ನಿರ್ದೇಶಕ ಡಾ. ಬಿ. ಗೋಪಾಲಾಚಾರ್ಯರು ರಾಷ್ಟ್ರ ಮಟ್ಟದಲ್ಲಿ ಸಲ್ಲಿಸುತ್ತಿರುವ ವಾಙ್ಮಯ ಸೇವೆಯನ್ನು ಗುರುತಿಸಿ ವಿದ್ವದ್ಭೂಷಣ ಪ್ರಶಸ್ತಿಯೊಂದಿಗೆ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಾಜಿ ಸಚಿವ ಹಾಗೂ ಉತ್ತರ ಪ್ರದೇಶದ ಬಿಜೆಪಿ ಪ್ರಧಾನ ಮುಖ್ಯ ಅಧಿಕಾರಿ ಡಾ. ಮಹೇಂದ್ರನಾಥ ಪಾಂಡೇಯ ಹಾಗೂ ಅಖಿಲ ಭಾರತೀಯ ವಿದ್ವತ್ ಪರಿಷತ್ನ ರಾಷ್ಟ್ರೀಯ ಅಧ್ಯಕ್ಷ ಜಯಶಂಕರ್ ಲಾಲ ತ್ರಿಪಾಠಿ ಮತ್ತು ಪರಿಷತ್ ನ ರಾಷ್ಟ್ರೀಯ ಮಹಾಸಚಿವ ಡಾ. ಕಾಮೇಶ್ವರ ಉಪಾಧ್ಯಾಯ ಮುಂತಾದ ಅನೇಕ ಗಣ್ಯರು ಉಪಸ್ಥಿತರಿದ್ದರು.ಈ ಸಭೆಯಲ್ಲಿ ರಾಷ್ಟ್ರದ ವಿವಿಧ ಕ್ಷೇತ್ರಗಳ ವಿದ್ವಾಂಸರನ್ನು ಆಹ್ವಾನಿಸಿ ಗೌರವಿಸಲಾಯಿತು. ದಕ್ಷಿಣ ಭಾರತದಿಂದ ಶ್ರೀ ಪುತ್ತಿಗೆ ಮಠದ ಅಧೀನ ಸಂಸ್ಥೆಯಾದ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನ ದ ನಿರ್ದೇಶಕ ಡಾ. ಬಿ. ಗೋಪಾಲಾಚಾರ್ಯರು ಪ್ರತಿನಿಧಿಯಾಗಿ ಈ ವಿದ್ವತ್ ಪರಿಷತ್ ನ ರಾಷ್ಟ್ರೀಯ ಅಧಿವೇಶನದಲ್ಲಿ ಭಾಗವಹಿಸಿದ್ದರು. ನೇಪಾಳ ಮತ್ತು ಭಾರತದ ಗುಡ್ಡಗಾಡು ಪ್ರದೇಶಗಳಲ್ಲಿ ಭಾರತೀಯ ಜ್ಞಾನ ಪರಂಪರಾ ರಕ್ಷಣೆಯ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಆಯೋಜಿಸಬೇಕಿರುವ ಕಾರ್ಯಸ್ವರೂಪಗಳನ್ನು ಸಭೆಯಲ್ಲಿ ನಿರ್ಣಯಿಸಲಾಯಿತು.;Resize=(128,128))