ಕಾರ್ಕಳ: ಕುಕ್ಕುಂದೂರಿನ ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆಯ ಸಭಾಂಗಣದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಕಾರ್ಕಳ ಮಹಾಮಸ್ತಕಾಭಿಷೇಕ ಸಮಿತಿ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.ಮುಂಬರುವ ಕಾರ್ಕಳ ಮಹಾಮಸ್ತಕಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಸಮಿತಿಯಿಂದ ಈ ಗೌರವ ಸಮರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ಎಸ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಸಮಾಜದ ಪ್ರಮುಖರಾದ ಪುಷ್ಪರಾಜ್ ಜೈನ್, ಸುನಿಲ್ ಕುಮಾರ್ ಬಜಗೋಳಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಮಿತಿಯ ಪದಾಧಿಕಾರಿಗಳು ಈ ವೇಳೆ ಮುಖ್ಯಮಂತ್ರಿಗಳೊಂದಿಗೆ ಮಹೋತ್ಸವದ ಸಿದ್ಧತೆಗಳು, ಅಗತ್ಯ ಮೂಲಸೌಕರ್ಯ ಹಾಗೂ ಸರ್ಕಾರದ ಸಹಕಾರ ಕುರಿತು ಚರ್ಚಿಸಿ, ಮಹೋತ್ಸವವನ್ನು ಯಶಸ್ವಿಯಾಗಿ ನೆರವೇರಿಸಲು ಸರ್ಕಾರದಿಂದ ಅಗತ್ಯ ಬೆಂಬಲ ನೀಡುವಂತೆ ಮನವಿ ಮಾಡಿದರು.