ಜಲಕ್ಷಾಮ: ಮಂಡಳಿ ಅಧ್ಯಕ್ಷ ರಾಮಪ್ರಸಾತ್‌ ಮನೋಹರ್‌ ಸಿಟಿ ರೌಂಡ್‌

| Published : Mar 18 2024, 01:49 AM IST / Updated: Mar 18 2024, 12:40 PM IST

ಜಲಕ್ಷಾಮ: ಮಂಡಳಿ ಅಧ್ಯಕ್ಷ ರಾಮಪ್ರಸಾತ್‌ ಮನೋಹರ್‌ ಸಿಟಿ ರೌಂಡ್‌
Share this Article
  • FB
  • TW
  • Linkdin
  • Email

ಸಾರಾಂಶ

ನಗರದಲ್ಲಿ ನೋಂದಣಿ ಮಾಡಿಕೊಳ್ಳದ ನೀರಿನ ಟ್ಯಾಂಕರ್‌ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ರಾಮಪ್ರಸಾತ್‌ ಮನೋಹರ್‌ ಎಚ್ಚರಿಕೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದಲ್ಲಿ ನೋಂದಣಿ ಮಾಡಿಕೊಳ್ಳದ ನೀರಿನ ಟ್ಯಾಂಕರ್‌ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ರಾಮಪ್ರಸಾತ್‌ ಮನೋಹರ್‌ ಎಚ್ಚರಿಕೆ ನೀಡಿದ್ದಾರೆ.

ಬಾಷ್ಯಂ ಪಾರ್ಕ್, ದೀನ ಬಂಧು ನಗರ, ಶ್ರೀ ರಾಮ ನಗರ ಸೇರಿದಂತೆ ವಿವಿಧ ಕೊಳಗೇರಿ ಪ್ರದೇಶಗಳಿಗೆ ಭೇಟಿ ನೀಡಿ ನೀರಿನ ವಿತರಣೆಯ ಬಗ್ಗೆ ಮಾಹಿತಿ ಪಡೆದ ಅವರು, ಕಾವೇರಿ ನೀರಿನ ಸಂಪರ್ಕ ಇರುವ ಪ್ರದೇಶಗಳಲ್ಲಿ ಸಮರ್ಪಕ ನೀರು ವಿತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಖಾಸಗಿ ನೀರಿನ ಟ್ಯಾಂಕರ್‌ಗಳ ನೋಂದಣಿ ಕಾರ್ಯ ಮುಗಿದಿದ್ದು, ಶೇ.95 ರಷ್ಟು ಖಾಸಗಿ ನೀರಿನ ಟ್ಯಾಂಕರ್ ಈಗಾಗಲೇ ನೋಂದಾಯಿಸ ಲಾಗಿದೆ.

 ನೋಂದಣಿ ಆಗದಿರುವ ಖಾಸಗಿ ನೀರಿನ ಟ್ಯಾಂಕರ್‌ಗಳ ಮೇಲೆ ಕಾನೂನಿನ ಕ್ರಮ ಕೈಗೊಳ್ಳಲಾಗುವುದು. ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ನಗರದ ಎಲ್ಲ ಭಾಗದಲ್ಲಿ ಟ್ಯಾಂಕ್ ಗಳನ್ನು ಅಳವಡಿಸುವ ಮೂಲಕ ಉಚಿತವಾಗಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 

ಕೆಲವೆಡೆ ಟ್ರಾಕ್ಟರ್ ಮಾರ್ಪಡಿಸಿ ನೀರಿನ ಟ್ಯಾಂಕರ್‌ಗಳಾಗಿ ಪರಿವರ್ತಿಸಲಾಗಿದೆ. ಇವುಗಳ ಮೇಲೆಯೂ ನಿಗಾ ಇಡಲಾಗುವುದು ಎಂದರು.ನಗರದ ಹೊರ ಭಾಗದಲ್ಲಿ ಇರುವಂತಹ ಗ್ರಾಮಗಳಿಗೆ ಇನ್ನೂ ಕಾವೇರಿ ನೀರಿನ ಸಂಪರ್ಕ ನೀಡಲಾಗಿಲ್ಲ. 

ಈ ಭಾಗದಲ್ಲಿ ಅಂತರ್ಜಲದ ಮೇಲೆ ಹೆಚ್ಚಿನ ಅವಲಂಬನೆ ಇದೆ. ಈ ಪ್ರದೇಶದಲ್ಲಿ ಬಿಬಿಎಂಪಿಯಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. 

ದಿನದ 24 ಗಂಟೆಗಳ ಕಾಲ ನಗರದ ಕುಡಿಯುವ ನೀರು ಸರಬರಾಜು ಸಮರ್ಪಕವಾಗಿ ನಡೆಯುವಂತೆ ಜಲಮಂಡಳಿ ನಿಗಾ ವಹಿಸುತ್ತಿದೆ ಎಂದು ತಿಳಿಸಿದರು.