ಸಾರಾಂಶ
ಹಾಸನದ ಅವರ ನಿವಾಸದಲ್ಲಿ ಅಧಿಕಾರಿಗಳು ಆಹ್ವಾನ ನೀಡಿದರು. ಮೈಸೂರು ಪೇಟ ತೊಡಿಸಿ, ಫಲಫುಷ್ಪ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.
ಕನ್ನಡಪ್ರಭ ವಾರ್ತೆ ಮೈಸೂರುಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕರ್ನಾಟಕದ ಪ್ರಸಿದ್ಧ ಸಾಹಿತಿ ಹಾಗೂ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಜಿಲ್ಲಾಡಳಿತದಿಂದ ಅಧಿಕೃತವಾಗಿ ಬುಧವಾರ ಆಮಂತ್ರಿಸಲಾಯಿತು. ಹಾಸನದ ಅವರ ನಿವಾಸದಲ್ಲಿ ಅಧಿಕಾರಿಗಳು ಆಹ್ವಾನ ನೀಡಿದರು. ಮೈಸೂರು ಪೇಟ ತೊಡಿಸಿ, ಫಲಫುಷ್ಪ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.
ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್, ನಗರ ಪಾಲಿಕೆ ಆಯುಕ್ತ ಶೇಖ್ತನ್ವೀರ್ ಆಸಿಫ್, ಎಡಿಸಿ ಡಾ.ಪಿ. ಶಿವರಾಜು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮತ್ತು ಸ್ವಾಗತ ಸಮಿತಿಯವರು ಪಾಲ್ಗೊಂಡಿದ್ದರು.