ಸಾರಾಂಶ
ದೊಡ್ಡಬಳ್ಳಾಪುರ: ತಾಲೂಕಿನ ಕಸಬಾ ಹೋಬಳಿಯ ಅರೆಹಳ್ಳಿ-ಗುಡ್ಡದಹಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿದೆ.
ದೊಡ್ಡಬಳ್ಳಾಪುರ: ತಾಲೂಕಿನ ಕಸಬಾ ಹೋಬಳಿಯ ಅರೆಹಳ್ಳಿ-ಗುಡ್ಡದಹಳ್ಳಿ ಗ್ರಾಮದ ಹಾಲು ಉತ್ಪಾದಕ ಸಹಕಾರ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಬೆಂಬಲಿತ ಅಭ್ಯರ್ಥಿಗಳ ಪಾಲಾಗಿದೆ.
ನೂತನ ಅಧ್ಯಕ್ಷರಾಗಿ ಎನ್.ಎಸ್ ರಾಜು ಮತ್ತು ಉಪಾಧ್ಯಕ್ಷರಾಗಿ ಎನ್.ವೇಣು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎನ್.ಎಸ್ ರಾಜು, ಉಪಾಧ್ಯಕ್ಷ ಸ್ಥಾನಕ್ಕೆ ಎನ್.ವೇಣು ಬಿಟ್ಟರೆ ಉಳಿದವರಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆ ಘೋಷಿಸಲಾಯಿತು.ಕಳೆದ ಜ.14ರಂದು ಅರೆಹಳ್ಳಿಗುಡ್ಡದಹಳ್ಳಿ ಎಂಪಿಸಿಎಸ್ ನ 12 ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ 10 ಮಂದಿ ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾದರೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಓರ್ವ, ಅವಿರೋಧವಾಗಿ ಓರ್ವ ಸದಸ್ಯ ಆಯ್ಕೆಯಾಗಿದ್ದರು.
ನೂತನ ಅಧ್ಯಕ್ಷ-ಉಪಾಧ್ಯಕ್ಷರನ್ನು ಮುಖಂಡರಾದ ಎನ್.ರಾಮಾಂಜಿನಪ್ಪ, ಜಯರಾಮರೆಡ್ಡಿ, ನಾರಾಯಣಮ್ಮ, ಗುಂಡಪ್ಪ, ಹನುಮಂತಗೌಡ, ಎ.ಮುನಿಯಪ್ಪ, ನಂಜೇಗೌಡ, ವೆಂಕಟೇಶ್, ರಾಜಣ್ಣ ಅಶ್ವತ್ಥನಾರಾಯಣ, ಪಟೇಲ್, ಶ್ರೀನಿವಾಸರೆಡ್ಡಿ ಅಭಿನಂದಿಸಿದರು.19ಕೆಡಿಬಿಪಿ4-ದೊಡ್ಡಬಳ್ಳಾಪುರದ ಅರೆಹಳ್ಳಿಗುಡ್ಡದಹಳ್ಳಿ ಎಂಪಿಸಿಎಸ್ ನೂತನ ಅಧ್ಯಕ್ಷ - ಉಪಾಧ್ಯಕ್ಷರನ್ನು ಮುಖಂಡರು ಅಭಿನಂದಿಸಿದರು.