ಕರ್ನಾಟಕ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘದ ಪದಾಧಿಕಾರಿಗಳ ಆಯ್ಕೆ

| Published : Mar 24 2025, 12:33 AM IST

ಸಾರಾಂಶ

ಹೊಳೆನರಸೀಪುರ ತಾಲೂಕಿನ ಶಿಕ್ಷಕಿಯರು ಸೇರಿದ ಸಭೆಯಲ್ಲಿ ಜಿಲ್ಲೆಯ ಸಾವಿತ್ರಿಬಾಯಿ ಫುಲೆ ಸಂಘದ ಗೌರವಾಧ್ಯಕ್ಷೆ ಕುಸುಮ ಅವರ ಮಾರ್ಗದರ್ಶನದಲ್ಲಿ ತಾಲೂಕು ಘಟಕವನ್ನು ರಚಿಸಲಾಯಿತು. ತಾಲೂಕು ಸಾವಿತ್ರಿಬಾಯಿ ಪುಲೆ ಸಂಘದ ಅಧ್ಯಕ್ಷೆಯಾಗಿ ಕೆ.ಎಂ.ಮಮತ, ಪ್ರಧಾನ ಕಾರ್ಯದರ್ಶಿಯಾಗಿ ಭ್ರಮರಾಂಭ ಹಾಗೂ ಖಜಾಂಚಿಯಾಗಿ ಮಧುಮತಿ, ೧೦ ಜನ ಉಪಾಧ್ಯಕ್ಷರು,೧೦ ಜನ ಸಂಘಟನಾ ಕಾರ್ಯದರ್ಶಿಗಳು ಹಾಗೂ ೧೦ ಜನ ಸಹ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಪಟ್ಟಣದ ಶಿಕ್ಷಕರ ಭವನದಲ್ಲಿ ಕರ್ನಾಟಕ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘದ ಅಧ್ಯಕ್ಷೆ ಮತ್ತು ಪದಾಧಿಕಾರಿಗಳನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು.

ತಾಲೂಕಿನ ಶಿಕ್ಷಕಿಯರು ಸೇರಿದ ಸಭೆಯಲ್ಲಿ ಜಿಲ್ಲೆಯ ಸಾವಿತ್ರಿಬಾಯಿ ಫುಲೆ ಸಂಘದ ಗೌರವಾಧ್ಯಕ್ಷೆ ಕುಸುಮ ಅವರ ಮಾರ್ಗದರ್ಶನದಲ್ಲಿ ತಾಲೂಕು ಘಟಕವನ್ನು ರಚಿಸಲಾಯಿತು. ತಾಲೂಕು ಸಾವಿತ್ರಿಬಾಯಿ ಪುಲೆ ಸಂಘದ ಅಧ್ಯಕ್ಷೆಯಾಗಿ ಕೆ.ಎಂ.ಮಮತ, ಪ್ರಧಾನ ಕಾರ್ಯದರ್ಶಿಯಾಗಿ ಭ್ರಮರಾಂಭ ಹಾಗೂ ಖಜಾಂಚಿಯಾಗಿ ಮಧುಮತಿ, ೧೦ ಜನ ಉಪಾಧ್ಯಕ್ಷರು,೧೦ ಜನ ಸಂಘಟನಾ ಕಾರ್ಯದರ್ಶಿಗಳು ಹಾಗೂ ೧೦ ಜನ ಸಹ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಿಕ್ಷಕಿಯರನ್ನು ಸನ್ಮಾನಿಸಿ, ಮಹಿಳಾ ದಿನಾಚರಣೆಯ ಶುಭಾಶಯ ಕೋರಲಾಯಿತು.