ಸಾರಾಂಶ
ಕನ್ನಡಪ್ರಭ ವಾರ್ತೆ ನಾಪೋಕ್ಲು
ಬೆಟ್ಟತ್ತೂರು ಗ್ರಾಮದಲ್ಲಿ ಕಾಡಾನೆಗಳ ಹಾವಳಿಯಿಂದ ರೈತರು ಸಮಸ್ಯೆ ಎದುರಿಸುವಂತಾಗಿದೆ.ಗ್ರಾಮದಲ್ಲಿ ಕಾಡಾನೆಗಳ ಹಿಂಡು ನಿರಂತರ ದಾಂಧಲೆ ನಡೆಸುತ್ತಿದ್ದು, ಕಾಫಿ, ತೆಂಗು, ಬಾಳೆ ಗಿಡಗಳನ್ನು ನಾಶಪಡಿಸಿವೆ. ಕಾಡಾನೆಗಳ ಹಾವಳಿಯಿಂದ ರೈತರು ಚಿಂತಾಕ್ರಾಂತರಾಗಿದ್ದಾರೆ.ಗ್ರಾಮದ ನಿವಾಸಿ ಮರದಾಳು ರಾಮಚಂದ್ರ ಅವರ ಮನೆಯ ಸುತ್ತಮುತ್ತ ದಾಳಿ ನಡೆಸಿರುವ ಕಾಡಾನೆಗಳ ಹಿಂಡು, ತೆಂಗು, ಬಾಳೆ ಗಿಡಗಳನ್ನು ಸಂಪೂರ್ಣ ಧ್ವಂಸಗೊಳಿಸಿವೆ. ಅಲ್ಲದೆ ಕೃಷಿ ಫಸಲುಗಳಿಗೆ ಹಾನಿ ಉಂಟು ಮಾಡಿದೆ. ಇತ್ತೀಚೆಗೆ ನೆಟ್ಟ ಹಣ್ಣಿನ ಗಿಡಗಳೂ ಧ್ವಂಸವಾಗಿವೆ. ಕಾಡಾನೆಗಳ ಉಪಟಳವನ್ನು ತಡೆಗಟ್ಟಲು ಇಲಾಖೆ ಮುಂದಾಗಿ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
---------------------------------------ಕಾಜೂರು ಶಾಲಾ ಕಿಟಕಿ ಗಾಜು ಹಾನಿ: ಕಿಡಿಗೇಡಿಗಳ ದುಷ್ಕೃತ್ಯ
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿಡಿಗೇಡಿಗಳು ಕಿಟಕಿ ಗಾಜುಗಳನ್ನು ಒಡೆದು ಹಾಕಿ, ಕುಡಿಯುವ ನೀರಿನ ನಲ್ಲಿ ದ್ವಂಸಗೊಳಿಸಿದ ಘಟನೆ ನಡೆದಿದೆ.70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಾಜೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ರಾತ್ರಿ ವೇಳೆ ಕಿಡಿಗೇಡಿಗಳು ಮದ್ಯಪಾನ ಸೇವಿಸಿ ಖಾಲಿ ಬಾಟಲಿಗಳನ್ನು ಹಾಗೂ ಬೀಡಿ ಸಿಗರೇಟಿನ ತುಂಡನ್ನು ಶಾಲಾ ಆವರಣದಲ್ಲೇ ಎಸೆದು ಪುಂಡಾಟ ಮೆರೆಯುತ್ತಿರುವುದಲ್ಲದೆ, ಶಾಲೆಯ ಆವರಣದ ಕಿಟಕಿ ಗಾಜುಗಳನ್ನು, ಕುಡಿಯುವ ನೀರಿನ ನಲ್ಲಿಯನ್ನು ಒಡೆದು ವಿಕೃತಿ ತೋರಿಸಿದ್ದಾರೆ.
ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಶಾಲಾ ಮುಖ್ಯೋಪಾಧ್ಯಾಯರು ದೂರು ನೀಡಿದ್ದು, ಐಗೂರು ಗ್ರಾಮ ಪಂಚಾಯಿತಿ ವತಿಯಿಂದ ಮೂರು ಬಾರಿ ಕುಡಿಯುವ ನೀರಿನ ನಲ್ಲಿಯನ್ನು ದುರಸ್ತಿಪಡಿಸಲಾಗಿತ್ತು. ಪದೇಪದೆ ಪುಂಡಾಟ ಮೆರೆಯುವ ಈ ಪೋಕರಿಗಳ ಅಟ್ಟಹಾಸಕ್ಕೆ ಪೊಲೀಸರು ಕಡಿವಾಣ ಹಾಕಬೇಕೆಂದು ಗ್ರಾಮಸ್ಥರು ಹಾಗೂ ಮಕ್ಕಳ ಪೋಷಕರು ಒತ್ತಾಯಿಸಿದ್ದಾರೆ.