ಸಾರಾಂಶ
ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ ಮಂದುವರೆದಿದೆ. ಕರಡಿಗೋಡುವಿನಲ್ಲಿ ಕಾಡಾನೆ ದಾಳಿಗೆ ತಹಸೀಲ್ದಾರ್ ಮಾವ ಬಲಿಯಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಸಿದ್ದಾಪುರ
ಜಿಲ್ಲೆಯಲ್ಲಿ ಮತ್ತೆ ಕಾಡಾನೆ ಮಾನವ ಸಂಘರ್ಷ ಮುಂದುವರೆದಿದ್ದು ಕರಡಿಗೋಡುವಿನಲ್ಲಿ ಕಾಡಾನೆ ದಾಳಿಗೆ ತಹಸೀಲ್ದಾರ್ ಮಾವ ಬಲಿಯಾಗಿದ್ದಾರೆ.ಮಡಿಕೇರಿ ತಹಸೀಲ್ದಾರ್ ಪ್ರವೀಣ್ ಅವರ ಮಾವ, ಕರಡಿಗೋಡು ಗ್ರಾಮದ ಕುಕ್ಕನೂರು ಪುರುಷೋತ್ತಮ್ (72) ಎಂಬುವವರೇ ಬಲಿಯಾದ ದುರ್ದೈವಿ.
ಶುಕ್ರವಾರ ಸಂಜೆ 5 ಗಂಟೆಗೆ ಮನೆ ಸಮೀಪದ ತೋಟಕ್ಕೆ ತೆರಳಿದ ಇವರು ರಾತ್ರಿಯಾದರು ಮನೆಗೆ ಹಿಂತಿರುಗಿ ಬಾರದ ಹಿನ್ನೆಲೆಯಲ್ಲಿ ಮಗಳು ಸಮೀಪದ ನಿವಾಸಿಗಳೊಂದಿಗೆ ಮನೆಯ ಸಮೀಪದ ತೋಟದಲ್ಲಿ ಹುಡುಕಾಟ ನಡೆಸಿದ್ದಾಗ ತೋಟದಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಕಾಡಾನೆ ದಾಳಿಗೆ ಸಾವನ್ನಪ್ಪಿರುವುದು ತಿಳಿಯಲಾಯಿತು. ಸ್ಥಳಕ್ಕೆ ಅರಣ್ಯಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಿದ್ದಾಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇತ್ತೀಚಿನ ದಿನಗಳಲ್ಲಿ ಕರಡಿಗೋಡು ಗ್ರಾಮದಲ್ಲಿ ಕಾಡಾನೆಗಳ ಉಪಟಳ ಅತಿಯಾಗಿದ್ದು ಬೆಳೆಗಾರರು, ಕಾರ್ಮಿಕರು ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ. ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೋಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕಟ್ಟುವಂತೆ ಒತ್ತಾಯಿಸಿದ್ದಾರೆ.