ಶ್ರೀಕೃಷ್ಣ ಕಾರಿಡಾರ್ ಯೋಜನೆಯಲ್ಲಿ ಎಂಜಿನಿಯರ್ಸ್‌ ಕೈಜೋಡಿಸಬೇಕು: ಯಶ್ಪಾಲ್‌ ಸುವರ್ಣ

| Published : Mar 05 2025, 12:31 AM IST

ಶ್ರೀಕೃಷ್ಣ ಕಾರಿಡಾರ್ ಯೋಜನೆಯಲ್ಲಿ ಎಂಜಿನಿಯರ್ಸ್‌ ಕೈಜೋಡಿಸಬೇಕು: ಯಶ್ಪಾಲ್‌ ಸುವರ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಟ್ರಾಫಿಕ್, ಪಾರ್ಕಿಂಗ್ ಸಮಸ್ಯೆ ನಿವಾರಣೆಯ ಜೊತೆಗೆ ನಗರ, ಅಭಿವೃದ್ಧಿ ವಿಸ್ತರಣೆ ನಿಟ್ಟಿನಲ್ಲಿ ಉಡುಪಿಯಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿರುವ ಶ್ರೀ ಕೃಷ್ಣ ಕಾರಿಡಾರ್ ಯೋಜನೆಗೆ ಉಡುಪಿ ಸಿವಿಲ್‌ ಎಂಜಿನಿಯರ್ಸ್‌ ಅಸೋಸಿಯೇಶನ್ ಸಲಹೆ, ಸೂಚನೆ ನೀಡುವಂತೆ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಟ್ರಾಫಿಕ್, ಪಾರ್ಕಿಂಗ್ ಸಮಸ್ಯೆ ನಿವಾರಣೆಯ ಜೊತೆಗೆ ನಗರ, ಅಭಿವೃದ್ಧಿ ವಿಸ್ತರಣೆ ನಿಟ್ಟಿನಲ್ಲಿ ಉಡುಪಿಯಲ್ಲಿ ಜಾರಿಗೊಳಿಸಲು ಉದ್ದೇಶಿಸಲಾಗಿರುವ ಶ್ರೀ ಕೃಷ್ಣ ಕಾರಿಡಾರ್ ಯೋಜನೆಗೆ ಉಡುಪಿ ಸಿವಿಲ್‌ ಎಂಜಿನಿಯರ್ಸ್‌ ಅಸೋಸಿಯೇಶನ್ ಸಲಹೆ, ಸೂಚನೆ ನೀಡುವಂತೆ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ತಿಳಿಸಿದ್ದಾರೆ.

ಅವರು ಉಡುಪಿ ಸಿವಿಲ್‌ ಎಂಜಿನಿಯರ್ಸ್ ಅಸೋಸಿಯೇಷನ್ ಉದ್ಘಾಟಿಸಿ ಮಾತನಾಡಿದರು.

ವಿಶ್ವದಲ್ಲಿಯೇ ಉಡುಪಿ ಪ್ರಸಿದ್ಧಿ ಜತೆಗೆ ವೇಗದ ಪ್ರಗತಿ ಹೊಂದಲು ಎಂಜಿನಿಯರ್ಸ್‌ಗಳ ಕೊಡುಗೆಯಿದೆ. ರಸ್ತೆ, ಕಟ್ಟಡಗಳಿಗೆ ನೀಲ ನಕಾಶೆಯೊಂದಿಗೆ ನಿರ್ಮಾಣ ಕ್ಷೇತ್ರಕ್ಕೆ ಕೊಡುಗೆ ಶ್ಲಾಘನೀಯ. ದೇಶ, ವಿದೇಶದ ಜನರು ಉಡುಪಿಯಲ್ಲಿ ಉದ್ಯಮ, ಅಭಿವೃದ್ಧಿಗೆ ಕೊಡುಗೆ ನೀಡುತ್ತಿದ್ದು, ಉಡುಪಿ ನಗರದ ಸೌಂದರ್ಯ ಹೆಚ್ಚಳಕ್ಕೂ ಕಾರಣರಾಗಿದ್ದಾರೆ ಎಂದು ಹೇಳಿದರು.ಮಣಿಪಾಲ ಎಂಐಟಿ ಸಿವಿಲ್‌ ಎಂಜಿನಿಯರಿಂಗ್ ವಿಭಾಗದ ಪ್ರೊ. ಡಾ.ಕಿರಣ್‌ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಿವಿಲ್‌ ಎಂಜಿನಿಯರ್ ನೀಲಕಂಠ ಎಂ. ಹೆಗ್ಡೆ ಪದಗ್ರಹಣ ನೆರವೇರಿಸಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ದಿನಕರ್ ಹೇರೂರು, ಪ್ರಮೋಶನ್ ಸ್ಟಿಕ್ಕರ್ ಬಿಡುಗಡೆ ಮಾಡಿದರು.ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಡಿಯುಡಿಸಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಮೋಹನ ರಾಜ್ ಕೆ.ಎಂ., ಸಂಘದ ಉಪಾಧ್ಯಕ್ಷ ಭರತ್ ಭೂಷಣ್, ಗಣೇಶ್‍ ಬೈಲೂರು, ಉದ್ಯಮಿ ಪ್ರಸಾದ್ ರಾಜ್‌ ಕಾಂಚನ್, ಮಹಾಬಲೇಶ್ವರ ಭಟ್, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.ಪಾಡಿಗಾರು ಲಕ್ಷ್ಮೀನಾರಾಯಣ ಉಪಾಧ್ಯ ಪ್ರಾರ್ಥಿಸಿದರು. ಸ್ವಾತಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ಸಂಘ ಅಧ್ಯಕ್ಷ ರಂಜನ್ ಸ್ವಾಗತಿಸಿದರು. ಕಾರ್ಯದರ್ಶಿ ಕೆ. ಹರೀಶ್ ವಂದಿಸಿದರು.