ಇಂಗ್ಲಿಷ್ ಮಾಧ್ಯಮ ತರಗತಿಗಳು ವಿದ್ಯಾರ್ಥಿಗಳಿಗೆ ಅನುಕೂಲ: ಶಾಸಕ ಮಂಜುನಾಥ್
Author : KannadaprabhaNewsNetwork
Published : Aug 06 2025, 01:15 AM IST
ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಯುಗದಲ್ಲಿ ಆಂಗ್ಲ ಮಾಧ್ಯಮ ಪ್ರಮುಖವಾಗಿ ಬೇಕಾಗಿರುವುದರಿಂದ ಕನ್ನಡದ ಜೊತೆಗೆ ಇಂಗ್ಲೀಷ್ ಮಾಧ್ಯಮ ತರಗತಿಯನ್ನು ಆರಂಭಿಸಿರುವುದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನುಕೂಲದಾಯಕವಾಗಿದೆ ಎಂದು ಶಾಸಕ ಎಂಆರ್ ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು...ಹನೂರು ತಾಲೂಕಿನ ಕಣ್ಣೂರು ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಒಂದನೇ ತರಗತಿ ಇಂಗ್ಲಿಷ್ ಮಾಧ್ಯಮ ಕೊಠಡಿ ಉದ್ಘಾಟಿಸಿ ನಂತರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಅಕ್ಷರ ಅಭ್ಯಾಸ ಮಾಡಿಸಿದರು....ನಂತರ ಮಾತನಾಡಿದ ಅವರು ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ಮಕ್ಕಳಿಗೆ ಬೇಕಾಗಿರುವುದರಿಂದ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ ವಿಚಾರ ಜೊತೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಿದೆ ವಿದ್ಯಾರ್ಥಿಗಳು ಚೆನ್ನಾಗಿ ಜ್ಞಾನಾರ್ಜನೆ ಬಳಸಿಕೊಂಡು ಶಿಕ್ಷಣದಿಂದ ಉತ್ತಮ ಫಲಿತಾಂಶ ನೀಡುವುದರ ಮೂಲಕ ಶೈಕ್ಷಣಿಕ ವಲಯದ ಸರ್ಕಾರಿ ಶಾಲೆಗಳನ್ನು ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು ಸಹ ಮಕ್ಕಳಿಗೆ ಉತ್ತಮ ವ್ಯಾಸಂಗ ನೀಡುವುದರ ಮೂಲಕ ಕಲಿಕೆ ಉತ್ತಮಗೊಳಿಸಬೇಕು ಎಂದರು.ಇದೇ ಸಂದರ್ಭದಲ್ಲಿ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಬಿ ಆರ್ ಸಿ ವೆಂಕಟೇಶ್ ಶಿಕ್ಷಣ ಸಂಯೋಜಕರಾದ ಚಿನ್ನಪ್ಪಯ್ಯ ಮಹೇಶ್ ದೈಹಿಕ ಶಿಕ್ಷಕ ಪರಿವೀಕ್ಷಕ ಕ್ಯಾಂಪರಾಜ್ ಸಿ ಆರ್ ಪಿ ಅನ್ವರ್ ಖಾನ್ ಸ್ಡಿಎಂಸಿ ಅಧ್ಯಕ್ಷ ಮಲ್ಲೇಶ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುಖ್ಯ ಶಿಕ್ಷಕಿ ಶಿವಮ್ಮ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಸಿದ್ದರಾಜು ಶಹಸಿಕ್ಷಕರಾದ ಸಾವು-ಕರಾಜ್ ಶಿವಕುಮಾರ್ ಸುರೇಶ್ ಕುಮಾರ್ ಶೃತಿ ಲತಾ ಇನ್ನಿತರ ಶಿಕ್ಷಕರು ಹಾಗೂ ಗ್ರಾಮಸ್ಥರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು....Hnr,2news,2 ಹನೂರು ಕಣ್ಣೂರು ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಪಾಠಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭಕ್ಕೆ ಕೊಠಡಿ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸುವಂತೆ ಶಾಸಕ ಮಂಜುನಾಥ್ ಮಾತನಾಡಿದರು.... | Kannada Prabha
Image Credit: KP
, ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ಮಕ್ಕಳಿಗೆ ಬೇಕಾಗಿರುವುದರಿಂದ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ ವಿಚಾರ. ಜೊತೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಿದೆ.
ಕನ್ನಡಪ್ರಭ ವಾರ್ತೆ ಹನೂರು
ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಮಾಧ್ಯಮ ಪ್ರಮುಖವಾಗಿ ಬೇಕಾಗಿರುವುದರಿಂದ ಕನ್ನಡದ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಯನ್ನು ಆರಂಭಿಸಿರುವುದು ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಅನುಕೂಲದಾಯಕವಾಗಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು.
ಹನೂರು ತಾಲೂಕಿನ ಕಣ್ಣೂರು ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಒಂದನೇ ತರಗತಿ ಇಂಗ್ಲಿಷ್ ಮಾಧ್ಯಮ ಕೊಠಡಿ ಉದ್ಘಾಟಿಸಿ ನಂತರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಅಕ್ಷರ ಅಭ್ಯಾಸ ಮಾಡಿಸಿದರು.
ನಂತರ ಮಾತನಾಡಿದ ಅವರು, ಸ್ಪರ್ಧಾತ್ಮಕ ಯುಗದಲ್ಲಿ ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ಮಕ್ಕಳಿಗೆ ಬೇಕಾಗಿರುವುದರಿಂದ ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆಯನ್ನು ಪ್ರಾರಂಭಿಸಿರುವುದು ಶ್ಲಾಘನೀಯ ವಿಚಾರ. ಜೊತೆಗೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಜ್ಞಾನಾರ್ಜನೆ ಪಡೆದು ಉತ್ತಮ ಫಲಿತಾಂಶ ನೀಡುವುದರ ಮೂಲಕ ಹೆಸರು ತರಬೇಕು. ಶೈಕ್ಷಣಿಕ ವಲಯದ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು ಸಹ ಶ್ರಮಿಸಬೇಕು ಎಂದರು.
ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಬಿ.ಆರ್ .ಸಿ ವೆಂಕಟೇಶ್, ಶಿಕ್ಷಣ ಸಂಯೋಜಕರಾದ ಚಿನ್ನಪ್ಪಯ್ಯ, ಮಹೇಶ್, ದೈಹಿಕ ಶಿಕ್ಷಕ ಪರಿವೀಕ್ಷಕ ಕ್ಯಾಂಪರಾಜ್, ಸಿಆರ್ ಪಿ ಅನ್ವರ್ ಖಾನ್, ಎಸ್ಡಿಎಂಸಿ ಅಧ್ಯಕ್ಷ ಮಲ್ಲೇಶ್, ಮುಖ್ಯ ಶಿಕ್ಷಕಿ ಶಿವಮ್ಮ, ಪಿಡಿಒ ಸಿದ್ದರಾಜು, ಸಹಶಿಕ್ಷಕರಾದ ಸಾವುಕರಾಜ್, ಶಿವಕುಮಾರ್, ಸುರೇಶ್ ಕುಮಾರ್, ಶೃತಿ, ಲತಾ, ಇನ್ನಿತರ ಶಿಕ್ಷಕರು ಹಾಗೂ ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.