ಸಾರಾಂಶ
ರಾಜ್ಯ ಪರೀಕ್ಷಾ ಪ್ರಾಧಿಕಾರದಿಂದ ಸ್ನಾತಕೋತ್ತರ ವೃತ್ತಿಪರ ಕೋರ್ಸುಗಳಾದ ಎಂಸಿಎ, ಎಂಬಿಎ ಕೋರ್ಸುಗಳ ಪ್ರವೇಶಕ್ಕೆ ಜೂನ್ 22ರಂದು ನಗರದ 3 ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ದಾವಣಗೆರೆ
ರಾಜ್ಯ ಪರೀಕ್ಷಾ ಪ್ರಾಧಿಕಾರದಿಂದ ಸ್ನಾತಕೋತ್ತರ ವೃತ್ತಿಪರ ಕೋರ್ಸುಗಳಾದ ಎಂಸಿಎ, ಎಂಬಿಎ ಕೋರ್ಸುಗಳ ಪ್ರವೇಶಕ್ಕೆ ಜೂನ್ 22ರಂದು ನಗರದ 3 ಪರೀಕ್ಷಾ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30 ಗಂಟೆವರೆಗೆ ಎಂ.ಸಿ.ಎ. ಕೋರ್ಸ್ಗೆ ಪರೀಕ್ಷೆ ನಡೆಯಲಿದೆ. 1269 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಮಧ್ಯಾಹ್ನ 2.30 ರಿಂದ 4.30 ಗಂಟೆವರೆಗೆ ಎಂ.ಬಿ.ಎ. ಕೋರ್ಸ್ಗೆ ಪರೀಕ್ಷೆ ನಡೆಯಲಿದೆ. 1694 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪರೀಕ್ಷೆಯಲ್ಲಿ ನಿಯಮದಂತೆ ನಡೆಸಬೇಕು. ಯಾವುದೇ ಅನುಮಾನ, ಗೊಂದಲಗಳಿಗೆ ಅವಕಾಶ ನೀಡದೇ ಪಾರದರ್ಶಕವಾಗಿ ನಡೆಸಬೇಕೆಂದು ತಿಳಿಸಿದರು.
ಡಿಡಿಪಿಯು ಕರಿಸಿದ್ದಪ್ಪ ಮಾತನಾಡಿ, ಪರೀಕ್ಷೆ ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ದಿನದಂದು ಅಗತ್ಯ ಜಾಗೃತ ದಳ ಸಿಬ್ಬಂದಿ ನೇಮಿಸಲಾಗಿದೆ. ಕೇಂದ್ರಗಳಲ್ಲಿ ಕೇಂದ್ರದ ಪ್ರಾಂಶುಪಾಲರು ಸಿಸಿಟಿವಿ ಚಿತ್ರಣಗಳನ್ನು ಸಂಪೂರ್ಣವಾಗಿ ರೆಕಾರ್ಡ್ ಮಾಡಿ ಪೆನ್ಡ್ರೈವಲ್ಲಿ ಸಂಗ್ರಹಿಸಿ, ಗೌಪ್ಯತಾ ಬಂಡಲು ಹಾಗೆಯೇ ಪರೀಕ್ಷಾ ಕಾರ್ಯ ಮುಕ್ತಾಯವಾದ ನಂತರ ರಹಸ್ಯ ಬಂಡಲುಗಳನ್ನು ಅಂಚೆ ಕಚೇರಿಯ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಕಳುಹಿಸಲಾಗುವುದು ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು.
- - --19ಕೆಡಿವಿಜಿ40: ದಾವಣಗೆರೆಯಲ್ಲಿ ಎಡಿಸಿ ಪಿ.ಎನ್. ಲೋಕೇಶ ಅಧ್ಯಕ್ಷತೆಯಲ್ಲಿ ಸ್ನಾತಕೋತ್ತರ ವೃತ್ತಿಪರ ಕೋರ್ಸುಗಳ ಪರೀಕ್ಷೆ ಕುರಿತು ಪೂರ್ವಭಾವಿ ಸಭೆ ನಡೆಯಿತು.