ಸಾರಾಂಶ
ಸುಂಟಿಕೊಪ್ಪ ಪೊಲೀಸ್ ಠಾಣೆ ಆವರಣದಲ್ಲಿ ಗಿಡ ನೆಡುವುದರೊಂದಿಗೆ ಪರಿಸರ ದಿನಾಚರಣೆ ಆಚರಿಸಲಾಯಿತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸುಂಟಿಕೊಪ್ಪ ಪೊಲೀಸ್ ಠಾಣೆ ಆವರಣದಲ್ಲಿ ಗಿಡ ನೆಡುವುದರೊಂದಿಗೆ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.ಸುಂಟಿಕೊಪ್ಪ ಪೊಲೀಸ್ ಠಾಣೆ ಆವರಣದಲ್ಲಿ ಠಾಣಾಧಿಕಾರಿ ಮೋಹನ್ ರಾಜ್ ಅವರು ಸಸಿಯನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು.
ಸುಂಟಿಕೊಪ್ಪ ನಾಡು ಪ್ರೌಢ ಶಾಲೆಯ ವಿದ್ಯಾರ್ಥಿನಿಯದ ಶ್ರೀಶಾ ರವರು ನಾವು ಪರಿಸರವನ್ನು ಉಳಿಸಬೇಕೆಂದರೆ ಪ್ಲಾಸಿಕ್ ಬಳಕೆಯನ್ನು ಕಡಿಮೆ ಮಾಡಿಬೇಕು, ಪರಿಸರದಲ್ಲಿರುವ ಪಕ್ಷಿಗಳಿಗೆ ಮನೆಯ ಮುಂದೆ ನೀರನ್ನು ಇಡಬೇಕು ಎಂದು ಹೇಳಿದರು .ಈ ಸಂದರ್ಭ ಅಪರಾಧ ವಿಭಾಗದ ಸಬ್ ಇನ್ಸ್ಪೇಕ್ಟರ್ ಭಾರತಿ, ಎಎಸ್ಐ ಸೈಮನ್ ಡಿ ಕುನ್ಹ, ಪೇದೆ ಜಗದೀಶ್ ಅವರು ಪಾಲ್ಗೊಂಡಿದರು.