ಸಾರಾಂಶ
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಭಾಂಗಣದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನಗರಸಭೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕೈಗಾರಿಕೆಗಳ ಸಂಘಗಳ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ನಡೆಯಿತು.
ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಭಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆಕನ್ನಡಪ್ರಭ ವಾರ್ತೆ ಉಡುಪಿ
ಮಾನವ ಸೇರಿದಂತೆ ಜಗತ್ತಿನ ಪ್ರತಿಯೊಂದು ಜೀವಿಯೂ ಪರಿಸರವನ್ನು ಅವಲಂಭಿಸಿದೆ. ಆದರೆ ಮಾನವನ ದುರಾಸೆಯಿಂದ ಗಾಳಿ, ನೀರು, ನೆಲ, ಸೇವಿಸುವ ಆಹಾರವು ಕಲುಷಿತವಾಗುತ್ತಿದೆ. ಆದ್ದರಿಂದ ಪರಿಸರದ ರಕ್ಷಣೆಯ ಜೊತೆಗೆ ಉತ್ತಮ ಪರಿಸರದ ಮಹತ್ವವನ್ನು ಮುಂದಿನ ಕರೆ ನೀಡಿದರು.ಅವರು ಗುರುವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಸಭಾಂಗಣದಲ್ಲಿ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನಗರಸಭೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಕೈಗಾರಿಕೆಗಳ ಸಂಘಗಳ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಪ್ಲಾಸ್ಟಿಕ್ ಎಂಬ ಪೆಡಂಭೂತ ಪರಿಸರದ ಸ್ವಾಸ್ಥ್ಯವನ್ನು ಹದಗೆಡಿಸುತ್ತಿದೆ. ಪ್ಲಾಸ್ಟಿಕ್ ನೀರಿನ ಮೂಲಗಳಲ್ಲಿ ಸೇರಿ ಅಲ್ಲಿನ ಜಲಚರಗಳು, ಸಸ್ಯ ಪ್ರಬೇಧ ಹಾಗೂ ಜೀವ ಸಂಕುಲಕ್ಕೆ ಹಾನಿ ಉಂಟು ಮಾಡುವುದರೊಂದಿಗೆ ಪರಿಸರದ ಅಸಮತೋಲನಕ್ಕೆ ಕಾರಣವಾಗುತ್ತಿವೆ. ಆದ್ದರಿಂದ ಏಕಬಳಕೆ ಪ್ಲಾಸ್ಟಿಕ್ ಅನ್ನು ಬಳಸದೇ ಮರುಬಳಕೆ ಮಾಡುವಂತಹ ಪ್ಲಾಸ್ಟಿಕ್ ಬಳಕೆ ಮಾಡಬೇಕು ಎಂದರು.ವಿದ್ಯಾರ್ಥಿಗಳು ಪರಿಸರದ ರಾಯಭಾರಿಗಳು. ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ಪ್ರತಿಯೊಂದು ಹಂತದಲ್ಲಿಯೂ ಯೋಚಿಸಬೇಕು. ಮನುಷ್ಯ ಅಭಿವೃದ್ಧಿಯ ಹೆಸರಿನಲ್ಲಿ ಕಾಡನ್ನು ಹಾಳು ಮಾಡದೇ, ಕಾಡುಪ್ರಾಣಿಗಳು ಅರಣ್ಯ ಪ್ರದೇಶಗಳಲ್ಲಿ ವಾಸಿಸಲು ಅನುವು ಮಾಡಿಕೊಡಬೇಕು ಎಂದ ಅವರು, ಮಣ್ಣಿನ ಆರೋಗ್ಯವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯ. ಕೃಷಿ ಸೇರಿದಂತೆ ಮತ್ತಿತರ ಚಟುವಟಿಕೆಗಳಿಗೆ ಸಾವಯವ ಗೊಬ್ಬರ ಬಳಸಬೇಕು ಎಂದರು.ಜಿ.ಪಂ. ಸಿಇಓ ಪ್ರತೀಕ್ ಬಾಯಲ್ ಮಾತನಾಡಿ, ಭೂಮಿಯ ಮೇಲೆ ಪ್ರತಿ ಜೀವಿಗಳಿಗೂ ಬದುಕುವ ಹಕ್ಕಿದೆ. ಮನುಷ್ಯ ಪರಿಸರಸ್ನೇಹಿಯಾಗಿ ಪರಿಸರವನ್ನು ರಕ್ಷಣೆ ಮಾಡಿದರೆ, ನಮ್ಮ ವೈಯಕ್ತಿಕ ಆರೋಗ್ಯವೂ ಸಹ ಸುಸ್ಥಿತಿಯಲ್ಲಿರುತ್ತದೆ ಎಂದರು.ಇದೇ ಸಂದರ್ಭದಲ್ಲಿ ಜೈಹಿಂದ್ ಇಂಡಸ್ಟ್ರೀಸ್ ವತಿಯಿಂದ ನೀಡಲಾದ ಪರಿಸರ ಸ್ನೇಹಿ ಸೆಣಬಿನ ಚೀಲಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ದಿನಾಚರಣೆ ಅಂಗವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸಿ ಎಂಬ ಘೋಷಣೆಯೊಂದಿಗೆ ಕಿರುನಾಟಕ ಪ್ರದರ್ಶನ ನಡೆಯಿತು.ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗಿಡ ನೆಡಲಾಯಿತು. ಮಣಿಪಾಲ ಎಂ.ಐ.ಟಿ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ. ಬಾಲಕೃಷ್ಣ ಮದ್ದೋಡಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ, ಮಾಹಿತಿ ನೀಡಿದರು.ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಯೋಗೇಶ್ ಪಿ.ಆರ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಅಶೋಕ್ ಕಾಮತ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿ ಕೆ.ಕೀರ್ತಿ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಶಿವಪ್ರಸಾದ್ ಅಡಿಗ ಶಿವಪುರ ನಿರೂಪಿಸಿದರು. ಕಚೇರಿ ರಾಜೇಶ್ವರಿ ವಂದಿಸಿದರು.ಕಾರ್ಯಕ್ರಮದ ಅಂಗವಾಗಿ ಎಂ.ಜೆ.ಸಿ. ಕಾಲೇಜು ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದ ವರೆಗೆ ನಡೆದ ಪರಿಸರ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಯೋಗೇಶ್ ಪಿ.ಆರ್. ಚಾಲನೆ ನೀಡಿದರು.