ಪ್ರಥಮ ಚಿಕಿತ್ಸೆ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು: ರೆ.ಫಾ.ಬೆನ್ನಿ ಮ್ಯಾಥ್ಯೂ

| Published : Oct 13 2025, 02:01 AM IST

ಪ್ರಥಮ ಚಿಕಿತ್ಸೆ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಂಡಿರಬೇಕು: ರೆ.ಫಾ.ಬೆನ್ನಿ ಮ್ಯಾಥ್ಯೂ
Share this Article
  • FB
  • TW
  • Linkdin
  • Email

ಸಾರಾಂಶ

ನರಸಿಂಹರಾಜಪುರ, ಯಾವುದೇ ಅವಘಡ ಸಂಭವಿಸಿದಾಗ ಪ್ರಥಮ ಚಿಕಿತ್ಸೆ ಬಹಳ ಮುಖ್ಯ. ಪ್ರಥಮ ಚಿಕಿತ್ಸೆ ಬಗ್ಗೆ ಪ್ರತಿಯೊಬ್ಬರೂ ತಿಳಿದು ಕೊಂಡಿರ ಬೇಕು ಎಂದು ಜೀವನ್ ಜ್ಯೋತಿ ಆಂಗ್ಲ ಮಾದ್ಯಮ ಪ್ರೌಢ ಶಾಲೆಆಡಳಿತ ಮಂಡಳಿ ಉಪಾಧ್ಯಕ್ಷ ರೆ.ಫಾ. ಬೆನ್ನಿ ಮ್ಯಾಥ್ಯೂ ತಿಳಿಸಿದರು.

- ಜೇಸಿಯಿಂದ ಜೀವನ್ ಜ್ಯೋತಿ ಪ್ರೌಢ ಶಾಲೆಯಲ್ಲಿ ಪ್ರಥಮ ಚಿಕಿತ್ಸೆ ಅರಿವು, ಅಗ್ನಿ ಅವಘಡದ ನಿಯಂತ್ರಣ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಯಾವುದೇ ಅವಘಡ ಸಂಭವಿಸಿದಾಗ ಪ್ರಥಮ ಚಿಕಿತ್ಸೆ ಬಹಳ ಮುಖ್ಯ. ಪ್ರಥಮ ಚಿಕಿತ್ಸೆ ಬಗ್ಗೆ ಪ್ರತಿಯೊಬ್ಬರೂ ತಿಳಿದು ಕೊಂಡಿರ ಬೇಕು ಎಂದು ಜೀವನ್ ಜ್ಯೋತಿ ಆಂಗ್ಲ ಮಾದ್ಯಮ ಪ್ರೌಢ ಶಾಲೆಆಡಳಿತ ಮಂಡಳಿ ಉಪಾಧ್ಯಕ್ಷ ರೆ.ಫಾ. ಬೆನ್ನಿ ಮ್ಯಾಥ್ಯೂ ತಿಳಿಸಿದರು.

ಶುಕ್ರವಾರ ಪಟ್ಟಣದ ಜೀವನ್ ಜ್ಯೋತಿ ಆಂಗ್ಲ ಮಾದ್ಯಮ ಪ್ರೌಢ ಶಾಲೆಯಲ್ಲಿ ಜೇಸಿ ಸಂಸ್ಥೆ, ಆರೋಗ್ಯ ಇಲಾಖೆ ಹಾಗೂ ಅಗ್ನಿ ಶ್ಯಾಮಕ ದಳದ ಸಂಯುಕ್ತ ಆಶ್ರಯದಲ್ಲಿ ಜೇಸಿ ಸಪ್ತಾಹದ 5 ನೇ ದಿನದ ಕಾರ್ಯಕ್ರಮದಲ್ಲಿ ಪ್ರಥಮ ಚಿಕಿತ್ಸೆ ಅರಿವು ಹಾಗೂ ಅಗ್ನಿ ಅವಘಡಗಳ ನಿಯಂತ್ರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅತಿಥಿಯಾಗಿದ್ದ ಮುತ್ತಿನಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ವಿನಯ್ ಮಾತನಾಡಿ, ಯಾವುದೇ ಅವಘಡ ಸಂಭವಿಸಿದಾಗ ಹತ್ತಿರ ಇರುವುವರು ತಕ್ಷಣ ಸ್ಪಂದಿಸಿ ಚಿಕಿತ್ಸೆ ನೀಡುವುದೇ ಪ್ರಥಮ ಚಿಕಿತ್ಸೆ ಎನ್ನಲಾಗುತ್ತದೆ. ನಾಯಿ ಅಥವಾ ಯಾವುದೇ ಪ್ರಾಣಿ ಕಚ್ಚಿದಾಗ ಹರಿಯುವ ನೀರಿನಲ್ಲಿ ತೊಳೆದು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆ ತರಬೇಕು. ಅಪಘಾತ ಸಂಭವಿಸಿ ಗಾಯಗಳಾದ, ಮೂಳೆ ಮುರಿದಾಗ, ಹಾವು ಕಚ್ಚಿದಾಗ, ವಿದ್ಯುತ್ ಅವಘಡ ಸಂಭವಿಸಿದಾಗ ಅನುಸರಿಸಬೇಕಾದ ಪ್ರಥಮ ಚಿಕಿತ್ಸೆ ಬಗ್ಗೆ ವಿವರಿಸಿದರು.

ಮುಖ್ಯ ಅತಿಥಿಯಾಗಿದ್ದ ಅಗ್ನಿ ಶ್ಯಾಮಕ ಇಲಾಖೆ ಅಗ್ನಿ ಪ್ರಮುಖ್ ಸಂತೋಷಕುಮಾರ್ ಮಾತನಾಡಿ, ಅನೇಕ ಬಾರಿ ಬೆಂಕಿಯಿಂದ ಅವಘಡ ಸಂಭವಿಸುತ್ತದೆ. ಪೆಟ್ರೋಲಿಯಂ ತೈಲಗಳಿಂದ, ಬ್ಯಾಟರಿ ಸ್ಪೋಟಿಸಿದಾಗ,ಅಡಿಗೆ ಅನಿಲ ಸೋರಿಕೆ ಯಾದಾಗ, ವಿದ್ಯುತ್ ನಿಂದ ಬೆಂಕಿ ಹತ್ತಿಕೊಳ್ಳುತ್ತದೆ. ಬೆಂಕಿ ಹೊತ್ತಿಕೊಂಡಾಗ ಮೊದಲು ಬೆಂಕಿ ಆರಿಸಲು ನಾವು ನೀರು, ಮರಳು ಉಪಯೋಗಿಸಿಬಹುದು. ಬೆಂಕಿ ಬಿದ್ದಾಗ ತಕ್ಷಣ ಅಗ್ನಿ ಶ್ಯಾಮಕ ದಳದವರಿಗೆ ದೂರವಾಣಿ ಕರೆ ಮಾಡಬೇಕು ಎಂದ ಅವರು ಬೆಂಕಿ ಆರಿಸುವ ವಿಧಾನದ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ಇದೇ ಸಂದರ್ಭದಲ್ಲಿ ಜೇಸಿ ಸಂಸ್ಥೆಯಿಂದ ಸೆಲ್ಯೂಟ್ ದ ಸೈಲೆಂಟ್‌ ವರ್ಕರ್ ಕಾರ್ಯಕ್ರಮದಡಿ ಅಗ್ನಿ ಶ್ಯಾಮಕ ದಳದ ಮುಖ್ಯಸ್ಥ ಎಂ.ಕೆ.ರಾಘವೇಂದ್ರ, ಮುತ್ತಿನಕೊಪ್ಪ ಪ್ರಾಥಮಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿನಯ್ ಅವರನ್ನು ಸನ್ಮಾನಿಸಲಾಯಿತು. ಜೀವನ್ ಜ್ಯೋತಿ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ಕೆ.ಟಿ.ಎಲ್ದೋ ಅವರನ್ನು ಗೌರವಿಸಲಾಯಿತು.

ಅಧ್ಯಕ್ಷತೆಯನ್ನು ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಸಾರ್ಥಕ್ ಗೌಡ ವಹಿಸಿದ್ದರು. ಸಭೆಯಲ್ಲಿ ಜೇಸಿ ಕಾರ್ಯದರ್ಶಿ ಮಿಥುನ್ ಗೌಡ, ಕಾರ್ಯಕ್ರಮ ಪ್ರಧಾನ ನಿರ್ದೇಶಕ ಜೋಯಿ ಬ್ರೋ,ಜೇಸಿ ಪೂರ್ವಾಧ್ಯಕ್ಷರಾದ ಮನು ಅಬ್ರಾಹಂ, ಎನ್‌.ಎಂ.ಕಾಂತರಾಜ್,ಜೀವನ್ ಜ್ಯೋತಿ ಶಾಲೆಯ ಪ್ರಾಂಶುಪಾಲ ಪೀಟರ್ ಬಾಬು, ಜೇಸಿ ಸಪ್ತಾಹದ ನಿರ್ದೇಶಕರಾದ ಸುಹಾಸ್, ಆದರ್ಶ, ರಚಿತ್, ಅಗ್ನಿ ಶ್ಯಾಮಕ ದಳದ ಠಾಣಾಧಿಕಾರಿ ರಮೇಶ್ ಇದ್ದರು.