ಎಲ್ಲರೂ ತಾಂತ್ರಿಕ ನೈಪುಣ್ಯತೆ ಹೆಚ್ಚಿಸಿಕೊಳ್ಳಲು ಮುಂದಾಗಬೇಕು: ಡಾ. ಎಂ.ವಿ.ವೆಂಕಟೇಶ್

| Published : Jul 02 2024, 01:42 AM IST

ಎಲ್ಲರೂ ತಾಂತ್ರಿಕ ನೈಪುಣ್ಯತೆ ಹೆಚ್ಚಿಸಿಕೊಳ್ಳಲು ಮುಂದಾಗಬೇಕು: ಡಾ. ಎಂ.ವಿ.ವೆಂಕಟೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಪಹಣಿಗೆ ಆಧಾರ್ ಲಿಂಕ್ ಮತ್ತು ಸರ್ಕಾರಿ ಲ್ಯಾಂಡ್‌ ಬೀಟ್ ಪ್ರಗತಿಯಲ್ಲಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ತಾಂತ್ರಿಕತೆಯ ನೈಪುಣ್ಯತೆಯನ್ನು ಕಂದಾಯ ಇಲಾಖೆ ಸಿಬ್ಬಂದಿ ಹೆಚ್ಚಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಡಿಸಿ ಕಚೇರಿ ಸಭಾಂಗಣದಲ್ಲಿ ಕಂದಾಯ ದಿನಾಚರಣೆ- - -

ದಾವಣಗೆರೆ: ಪಹಣಿಗೆ ಆಧಾರ್ ಲಿಂಕ್ ಮತ್ತು ಸರ್ಕಾರಿ ಲ್ಯಾಂಡ್‌ ಬೀಟ್ ಪ್ರಗತಿಯಲ್ಲಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ತಾಂತ್ರಿಕತೆಯ ನೈಪುಣ್ಯತೆಯನ್ನು ಕಂದಾಯ ಇಲಾಖೆ ಸಿಬ್ಬಂದಿ ಹೆಚ್ಚಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಹೇಳಿದರು.

ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯೊಂದಿಗೆ ಆಚರಿಸಲಾದ ಕಂದಾಯ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರೈತರ ಜಮೀನಿನ ಪಹಣಿಗೆ ಆಧಾರ್ ಜೋಡಣೆ ಮಾಡುವ ಕೆಲಸ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಯುತ್ತಿದೆ. ಸರ್ಕಾರಿ ಭೂಮಿ ಒತ್ತುವರಿ ಆಗದಂತೆ ತಡೆಗಟ್ಟಲು ಲ್ಯಾಂಡ್‌ ಬೀಟ್ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಇವೆರಡರಲ್ಲಿಯೂ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಇತರೆ ಇಲಾಖೆಗಳಿಗಿಂತಲೂ ಕಂದಾಯ ಇಲಾಖೆಯ ಜವಾಬ್ದಾರಿ ಹೆಚ್ಚಿದೆ. ರೈತರು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಸೇವೆ ಹಾಗೂ ಸೌಲಭ್ಯಗಳನ್ನು ಕಲ್ಪಿಸುವ ಇಲಾಖೆಯಾಗಿದೆ ಎಂದರು.

ಕಂದಾಯ ಇಲಾಖೆ ಆಧುನಿಕತೆಯತ್ತ ದಾಪುಗಾಲಿಟ್ಟಿದ್ದು, ಡಿಜಿಟಲೀಕರಣ ಆಗುತ್ತಿದೆ. ಆದ್ದರಿಂದ ಕಂದಾಯ ಇಲಾಖೆಯಲ್ಲಿನ ಎಲ್ಲ ಸಿಬ್ಬಂದಿ ತಾಂತ್ರಿಕ ನೈಪುಣ್ಯತೆ ಹೆಚ್ಚಿಸಿಕೊಳ್ಳಬೇಕು. ಆ ಮೂಲಕ ಸಾರ್ವಜನಿಕರಿಗೆ ಗುಣಮಟ್ಟ ಹಾಗೂ ತ್ವರಿತವಾಗಿ ಸಮರ್ಪಕ ಸೇವೆ ನೀಡಲು ಶ್ರಮಿಸಬೇಕಿದೆ. ಹೊಸ ಹೊಸ ತಂತ್ರಜ್ಞಾನಗಳನ್ನು ಇಲಾಖೆ ಅಳವಡಿಸಿಕೊಳ್ಳುವ ಮೂಲಕ ಜನರಿಗೆ ಸುಲಭವಾಗಿ ಸೇವೆ ನೀಡುವಲ್ಲಿ ಸಾಕಷ್ಟು ಬದಲಾವಣೆ ಆಗುತ್ತಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಶ್ರೀ, ಅಭಿಷೇಕ್ ಹಾಗೂ ತಹಸೀಲ್ದಾರರು, ಸಿಬ್ಬಂದಿ ಉಪಸ್ಥಿತರಿದ್ದರು.

- - -

-1ಕೆಡಿವಿಜಿ43ಃ:

ದಾವಣಗೆರೆಯಲ್ಲಿ ಕಂದಾಯ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಕೇಕ್ ಕತ್ತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.