ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಇಎಸ್ಐ ಸೌಲಭ್ಯ ಪಡೆಯಲು ಕಾರ್ಮಿಕರ ವೇತನ ಮಿತಿ ಹೆಚ್ಚಳದ ಬಗ್ಗೆ ಪರಿಶೀಲನೆಗೆ ಕೇಂದ್ರ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಇಎಸ್ಐ ಸೌಲಭ್ಯ ಪಡೆಯುತ್ತಿರುವ ಖಾಸಗಿ ವಲಯ ಮತ್ತು ಅರೆ ಸರ್ಕಾರಿ ನೌಕರರ ವೇತನ ಕಾಲಕಾಲಕ್ಕೆ ಪರಿಷ್ಕರಣೆಯಾಗುತ್ತಿದ್ದರೂ ವೇತನ ಮೀತಿಯಿಂದಾಗಿ ಈ ಪರಿಷ್ಕರಣೆಯ ಲಾಭ ಎಲ್ಲಾ ಕಾರ್ಮಿಕರಿಗೆ ಸಿಗುತ್ತಿಲ್ಲ. ಪ್ರಸ್ತುತ, ಮಾಸಿಕ 21,000 ರು.ಗಿಂತ ಕಡಿಮೆ ವೇತನ ಪಡೆಯುವ ಕಾರ್ಮಿಕರಿಗೆ ಮಾತ್ರ ಇಎಸ್ಐ ಸೌಲಭ್ಯ ಸಿಗುತ್ತಿದೆ. ಅದಕ್ಕಿಂತ ಹೆಚ್ಚು ವೇತನ ಪಡೆಯುವವರು ಇಎಸ್ಐ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಆದ್ದರಿಂದ ಮನವಿಯಂತೆ ಈ ಮಾಸಿಕ ವೇತನ ಮಿತಿಯನ್ನು 21,000 ರು.ನಿಂದ 35,000 ರು.ಗೆ ಹೆಚ್ಚಿಸಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.ತಮ್ಮ ಮನವಿಗೆ ಸ್ಪಂದಿಸಿದ ಕೇಂದ್ರ ಕಾರ್ಮಿಕ ಇಲಾಖೆಯು ವೇತನ ಮಿತಿ ಹೆಚ್ಚಳದ ಬಗ್ಗೆ ಪರಿಶೀಲಿಸಿ ವರದಿ ನೀಡಲು ತಜ್ಞರ ಸಮಿತಿಯೊಂದನ್ನು ರಚಿಸಿದೆ ಮತ್ತುಈ ಸಮಿತಿಯು ಕಾರ್ಮಿಕರ ಪರವಾಗಿ ವರದಿ ನೀಡುವ ಭರವಸೆ ಇದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.ಕೇಂದ್ರ ಇಎಸ್ಐ ನಿಗಮದ ಅಧ್ಯಕ್ಷರನ್ನೊಳಗೊಂಡು, ವಿ.ವಿ. ಗಿರಿ ರಾಷ್ಟ್ರೀಯ ಕಾರ್ಮಿಕ ನಿಗಮದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ಸಮಿತಿಯ ಶಿಫಾರಸುಗಳನ್ನು ನಿರೀಕ್ಷಿಸಿ ಇಎಸ್ಐ ವೇತನ ಹೆಚ್ಚಳದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಂದನಾ ಗುರ್ನಾನಿ ಅವರು ಸಂಸದರಿಗೆ ಪತ್ರ ಮೂಲಕ ತಿಳಿಸಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))