ಸಾರಾಂಶ
ಮೊಳಕಾಲ್ಮುರು: ಬಡ ಜನರ ಕಲ್ಯಾಣಕ್ಕಾಗಿ ಸರ್ಕಾರ ನೀಡುವ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎನ್.ವೈ.ಗೋಪಾಲಕೃಷ್ಣ ಹೇಳಿದರು.ತಾಲೂಕಿನ ಹಾನಗಲ್ ಗ್ರಾಮದ ಪ್ರವಾಸಿ ಮಂದಿರದ ಆವರಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪಂಪು ಮೋಟಾರ್ ಹಾಗೂ ಪೂರಕ ಸಾಮಾಗ್ರಿಗಳನ್ನು ವಿತರಿಸಿ ಅವರು ಮಾತನಾಡಿದರು.ರೈತರ ಸಬಲತೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿ ಮಾಡಿದೆ. ಅದರಲ್ಲಿ ಗಂಗಾ ಕಲ್ಯಾಣ ಯೋಜನೆ ಮಹತ್ವದ್ದಾಗಿದೆ. ರೈತರು ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸರ್ಕಾರ ಉಚಿತವಾಗಿ ಪಂಪು ಮೋಟಾರ್ ನೀಡುತ್ತಿದೆ. ಅವುಗಳನ್ನು ಉತ್ತಮವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.ಇದೇ ವೇಳೆ ಕ್ಷೇತ್ರ ವ್ಯಾಪ್ತಿಯ 20 ಫಲಾನುಭವಿಗಳಿಗೆ ಪಂಪು ಮೋಟಾರ್ ಹಾಗೂ ಪೂರಕ ಸಾಮಾಗ್ರಿಗಳನ್ನು ವಿತರಿಸಿದರು.ಈ ಸಂದರ್ಭದಲ್ಲಿ ಪರಿಶಿಷ್ಟ ಪಂಗಡ ಇಲಾಖೆಯ ಗೌತಮ್, ಶ್ರೀಕಾಂತ್, ಭರತ್ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ.ಪ್ರಕಾಶ, ಉಜ್ಜಿನಪ್ಪ ಇದ್ದರು.