ಸಾರಾಂಶ
ಮಾಸನಹಳ್ಳಿಯಲ್ಲಿ ಗ್ರಾಮದ ಹೊರವಲಯದ ಮರವೊಂದಕ್ಕೆ ಈಶ್ವರ ಎಂಬಾತ ನೇಣುಹಾಕಿಕೊಂಡು ಮೃತಪಟ್ಟಿದ್ದಾನೆ.
ಚಿಂತಾಮಣಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕರ್ಲಪರ್ತಿ ಬಳಿಯ ಮಾಸನಹಳ್ಳಿಯಲ್ಲಿ ನಡೆದಿದ್ದು ಮೃತ ಯುವಕನನ್ನು ಈಶ್ವರ (38) ಎಂದು ಗುರ್ತಿಸಲಾಗಿದೆ.
ಗುರುವಾರ ಮಧ್ಯಾಹ್ನ 11 ರ ಸುಮಾರಿಗೆ ಗ್ರಾಮದ ಹೊರವಲಯದ ಮರವೊಂದಕ್ಕೆ ಈಶ್ವರ ನೇಣುಹಾಕಿಕೊಂಡು ಮೃತಪಟ್ಟಿರುವುದನ್ನು ಕಂಡ ಗ್ರಾಮಸ್ಥರು ತಾಲೂಕಿನ ಕೆಂಚರ್ಲಹಳ್ಳಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಬ್ ಇನ್ಸ್ಪೆಕ್ಟರ್ ಶಿವಕುಮಾರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.