ಸಾರಾಂಶ
ಏಕಾಏಕಿ ಒಂಟಿ ಸಲಗ ದಾಳಿ ಮಾಡಿದ್ದರಿಂದ ವೆಂಕಟಾಚಲಯ್ಯರವರ ತಲೆ ಭಾಗಕ್ಕೆ ತೀವ್ರಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹಾರೋಹಳ್ಳಿ: ಒಂಟಿ ಸಲಗದ ದಾಳಿಗೆ ಸಿಲುಕಿ ರೈತನೊಬ್ಬ ಸಾವನ್ನಪ್ಪಿರುವ ಘಟನೆ ಹಾರೋಹಳ್ಳಿ ತಾಲೂಕಿನ ದೊಡ್ಡೂರು ಗ್ರಾಮದಲ್ಲಿ ನಡೆದಿದೆ. ಬನ್ನೇರುಘಟ್ಟ ರಾಷ್ಟ್ರೀಯ ಅರಣ್ಯ ವ್ಯಾಪ್ತಿಯಲ್ಲಿ ಹಸು ಮೇಯಿಸಲು ರೈತ ವೆಂಕಟಾಚಲಯ್ಯ ತೆರಳಿದ್ದರು. ಈ ವೇಳೆ ಏಕಾಏಕಿ ಒಂಟಿ ಸಲಗ ದಾಳಿ ಮಾಡಿದ್ದರಿಂದ ವೆಂಕಟಾಚಲಯ್ಯರವರ ತಲೆ ಭಾಗಕ್ಕೆ ತೀವ್ರಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
;Resize=(128,128))
;Resize=(128,128))