ಈತ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮೂರು ಲಕ್ಷ ಹಾಗೂ ಖಾಸಗಿಯಾಗಿ ಆರು ಲಕ್ಷ ಒಟ್ಟು ಒಂಬತ್ತು ಲಕ್ಷ ಸಾಲ
ಕನ್ನಡಪ್ರಭ ವಾರ್ತೆ ರಾವಂದೂರುತಂಬಾಕಿಗೆ ಸೂಕ್ತ ಬೆಲೆ ಸಿಗದ ಕಾರಣ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ. ಪಿರಿಯಾಪಟ್ಟಣ ತಾಲೂಕು ತಮ್ಮಡಹಳ್ಳಿ ಗ್ರಾಮದ ರೈತ ನಾಗೇಗೌಡ (61) ಭಾನುವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದು, ತಕ್ಷಣ ಇವರನ್ನು ನೋಡಿದ ಮನೆಯವರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ. ಮೃತರಿಗೆ ಪತ್ನಿ, ಒರ್ವ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.
ಈತ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮೂರು ಲಕ್ಷ ಹಾಗೂ ಖಾಸಗಿಯಾಗಿ ಆರು ಲಕ್ಷ ಒಟ್ಟು ಒಂಬತ್ತು ಲಕ್ಷ ಸಾಲ ಮಾಡಿದ್ದು, ತಾನು ಬೆಳೆದ ತಂಬಾಕು ಬೆಳೆಗೆ ಸೂಕ್ತ ಬೆಲೆ ಸಿಗದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ. ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.