ರಾಜ್ಯದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಎಲ್ಲ ಸಿದ್ದತೆಗಳು ನಡೆದಿವೆ. ಆದರೆ, ಸರ್ಕಾರ ವಿಧಿಸಿರುವ ಷರತ್ತುಗಳನ್ನು ಸಡಿಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ತಹಸೀಲ್ದಾರ್ಗೆ ಮನವಿ ಸಲ್ಲಿಸಿದ್ದಾರೆ.
ಹೂವಿನಹಡಗಲಿ: ರಾಜ್ಯದಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಎಲ್ಲ ಸಿದ್ದತೆಗಳು ನಡೆದಿವೆ. ಆದರೆ, ಸರ್ಕಾರ ವಿಧಿಸಿರುವ ಷರತ್ತುಗಳನ್ನು ಸಡಿಲಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ತಹಸೀಲ್ದಾರ್ಗೆ ಮನವಿ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಎಚ್. ಸಿದ್ದಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಶಿವರಾಜ ಹೊಳಗುಂದಿ, ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಸರ್ಕಾರ ಹತ್ತಾರು ಷರತ್ತುಗಳನ್ನು ವಿಧಿಸಿದೆ, ಅವುಗಳನ್ನು ಈ ಕೂಡಲೇ ಕೈ ಬಿಡಬೇಕು, ಹೂವಿನಹಡಗಲಿ ತಾಲೂಕು ಕೇಂದ್ರದಿಂದ ಧಾರವಾಡ 200 ಕಿಮೀ ದೂರ ಇದೆ. ಇಲ್ಲಿಂದ ಮೆಕ್ಕೆಜೋಳವನ್ನು ರೈತರೇ ಲಾರಿಯಲ್ಲಿ ತೆಗೆದುಕೊಂಡು ಹೋಗಬೇಕಿದೆ. ಜತೆಗೆ ಹಾಲು ಉತ್ಪಾದಕರ ಸಂಘದ ಉಪ ಕಚೇರಿಗಳಲ್ಲಿ ರೈತರು ನೋಂದಣಿ ಮಾಡಬೇಕು, ನೋಂದಣಿ ಆದ ರೈತರು 1 ಕೆಜಿ ಮೆಕ್ಕೆಜೋಳ ಮಾದರಿಯನ್ನು ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಗಳಿಗೆ ಕೊಡಬೇಕು. ಧಾರವಾಡದ ಪಶು ಆಹಾರ ಘಟಕ ತಲುಪಿಸುವ ವ್ಯವಸ್ಥೆಯನ್ನು ರೈತರೇ ಮಾಡಬೇಕಿದೆ. ಹಾಗಾಗಿ, ಇದರಿಂದ ರೈತರಿಗೆ ಬಹಳಷ್ಟು ತೊಂದರೆ ಉಂಟಾಗುತ್ತಿದೆ. ಈ ಕೂಡಲೇ ಷರತ್ತುಗಳನ್ನು ಕೈ ಬಿಟ್ಟು ಸ್ಥಳೀಯ ಮಟ್ಟದಲ್ಲಿ ಸರ್ಕಾರವೇ ಎಲ್ಲ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಎಚ್. ಸಿದ್ದಪ್ಪ, ಪ್ರಧಾನ ಕಾರ್ಯದರ್ಶಿ ಶಿವರಾಜ ಹೊಳಗುಂದಿ, ಬಸವರಾಜ, ದುರುಗಪ್ಪ, ದಾವಲ್ಸಾಬ್, ಜಯರುದ್ರಪ್ಪ, ಎನ್.ಎಂ. ಸಿದ್ದೇಶ, ಎಚ್. ಸುರೇಶ, ಕಂಠಿ ಬಸಪ್ಪ ಸೇರಿದಂತೆ ಇತರರು ತಹಸೀಲ್ದಾರ್ ಜಿ. ಸಂತೋಷಕುಮಾರ ಅವರಿಗೆ ಮನವಿ ಪತ್ರ ಸಲ್ಲಿಸಿದರು.