ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರುಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ ಸೇರಿ ಮೂವರಿಗೆ 1.25 ಕೋಟಿ ರು. ದಂಡ ಪಾವತಿಸುವಂತೆ ಸೂಚಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಬುಧವಾರ ಪ್ರಕರಣದ ತೀರ್ಪು ನೀಡಿದ ನ್ಯಾಯಾಲಯ ಆರೋಪಿಗಳು 1.25 ಕೋಟಿ ರು. ದಂಡ ಪಾವತಿಸಬೇಕು. ಒಂದು ವೇಳೆ ದಂಡ ಪಾವತಿಸಲು ಸಾಧ್ಯವಾಗದಿದ್ದರೆ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶಿಸಿದೆ.ಮಾಜಿ ಸಚಿವ ಬಿ.ನಾಗೇಂದ್ರ, ಅನಿಲ್ ರಾಜಶೇಖರ್ ಮತ್ತು ಚುಂಡೂರು ಭಾಸ್ಕರ್ ವಿರುದ್ಧ ವಿಎಸ್ಎಲ್ ಸ್ಟೀಲ್ಸ್ ಸಂಸ್ಥೆಯು ಚೆಕ್ಬೌನ್ಸ್ ಕೇಸ್ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.ದೂರುದಾರ ವಿಎಸ್ಎಲ್ ಸ್ಟೀಲ್ಸ್ ಸಂಸ್ಥೆಯೊಂದಿಗೆ ಆರೋಪಿಗಳ ಪಾಲುದಾರಿಕೆಯ ಬಿ.ಸಿ.ಇನ್ಫ್ರಾಸ್ಟ್ರಕ್ಚರ್ ಆ್ಯಂಡ್ ರಿಸೋರ್ಸ್ ಕಂಪನಿ ನಡುವೆ ಹಣಕಾಸು ವ್ಯವಹಾರ ಇತ್ತು. 2013ರಿಂದ ಹಣಕಾಸು ವಿವಾದ ಉಂಟಾಗಿದ್ದು, ಒಟ್ಟು 2.53 ಕೋಟಿ ರು. ಪಾವತಿಸಬೇಕಿತ್ತು. ಒಂದು ಕೋಟಿ ರು. ಚೆಕ್ ನೀಡಲಾಗಿತ್ತು. ಆದರೆ, 2022 ರಲ್ಲಿ ಚೆಕ್ಬೌನ್ಸ್ ಆದ ಕಾರಣ ವಿಎಸ್ಎಲ್ ಸ್ಟೀಲ್ಸ್ ಸಂಸ್ಥೆಯು ಪ್ರಕರಣ ದಾಖಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1.23 ಕೋಟಿ ರು. ದಂಡ ಪಾವತಿಸುವಂತೆ ಆದೇಶ ನೀಡಿದೆ.
===ಇದರಲ್ಲಿ 10 ಸಾವಿರ ರು. ಸರ್ಕಾರಕ್ಕೆ ಉಳಿದ ಹಣ ದೂರುದಾರ ಕಂಪನಿಗೆ ಪಾವತಿಸಬೇಕು ಎಂದು ತಿಳಿಸಿದೆ. ದಂಡ ಪಾವತಿಸುವಲ್ಲಿ ತಪ್ಪಿದರೆ ಒಂದು ವರ್ಷ ಸೆರೆವಾಸದ ಶಿಕ್ಷೆ ಅನುಭವಿಸಬೇಕು ಎಂದು ಹೇಳಿದೆ.