ಜಮಖಂಡಿ ನಗರದ ಶಾಂತಿನಗರ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 10 ಎಕರೆ ಬೆಟ್ಟದ ಪ್ರದೇಶದಲ್ಲಿ ಬೆಂಕಿ ಹರಡಿದೆ.

ಜಮಖಂಡಿ: ನಗರದ ಶಾಂತಿನಗರ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ. ಸುಮಾರು 10 ಎಕರೆ ಬೆಟ್ಟದ ಪ್ರದೇಶದಲ್ಲಿ ಬೆಂಕಿ ಹರಡಿದೆ. ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಅಗ್ನಿ ಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಇಷ್ಟಾದರೂ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಸಣ್ಣಪುಟ್ಟ ಮರಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳೀಯ ಪರಿಸರ ಪ್ರೇಮಿಗಳು, ಪ್ರಾಣಿ ಪ್ರೀಯರು ಆತಂಕ ವ್ಯಕ್ತಪಡಿಸಿದ್ದು, ಅಗ್ನಿ ಅವಘಡಗಳು ಸಂಭವಿಸಿದಾಗ ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಕ್ರಮಕ್ಕೆ ಮುಂದಾಗ ಬೇಕು ಎಂದು ಆಗ್ರಹಿಸಿದ್ದಾರೆ.