ಮಾಧ್ಯಮ ಪ್ರಮಾಣೀಕರಣ, ಮೇಲ್ವಿಚಾರಣಾ ಸಮಿತಿ ಮಾರ್ಗಸೂಚಿ ಅನುಸರಿಸಲಿ-ವೆಂಕಟೇಶಕುಮಾರ

| Published : Feb 25 2024, 01:50 AM IST

ಮಾಧ್ಯಮ ಪ್ರಮಾಣೀಕರಣ, ಮೇಲ್ವಿಚಾರಣಾ ಸಮಿತಿ ಮಾರ್ಗಸೂಚಿ ಅನುಸರಿಸಲಿ-ವೆಂಕಟೇಶಕುಮಾರ
Share this Article
  • FB
  • TW
  • Linkdin
  • Email

ಸಾರಾಂಶ

ಚುನಾವಣೆಗಳಲ್ಲಿ ನೀತಿ ಸಂಹಿತೆ ಜಾರಿ ದಿನಾಂಕದಿಂದ ಮುಕ್ತಾಯದವರೆಗೆ ಚುನಾವಣಾ ನಿಯೋಜಿತ ಸಮಿತಿ, ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಅದರನ್ವಯ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶಕುಮಾರ್ ಆರ್. ಹೇಳಿದರು.

ಗದಗ: ಚುನಾವಣೆಗಳಲ್ಲಿ ನೀತಿ ಸಂಹಿತೆ ಜಾರಿ ದಿನಾಂಕದಿಂದ ಮುಕ್ತಾಯದವರೆಗೆ ಚುನಾವಣಾ ನಿಯೋಜಿತ ಸಮಿತಿ, ಅಧಿಕಾರಿಗಳು ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ, ಅದರನ್ವಯ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಚುನಾವಣಾ ಆಯೋಗದ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ವೆಂಕಟೇಶಕುಮಾರ್ ಆರ್. ಹೇಳಿದರು.ಲೋಕಸಭಾ ಚುನಾವಣೆ-2024ರ ಅಂಗವಾಗಿ ಕರ್ನಾಟಕ ಚುನಾವಣಾ ಆಯೋಗದಿಂದ ಶುಕ್ರವಾರ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯ ಜವಾಬ್ದಾರಿ, ಕರ್ತವ್ಯಗಳ ಬಗ್ಗೆ ಜಿಲ್ಲಾ ಚುನಾವಣಾ ವಿಭಾಗದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ತಮ್ಮ ಪ್ರಚಾರದ ಮಾರ್ಗವಾಗಿ ದಿನಪತ್ರಿಕೆಗಳು, ಸುದ್ದಿವಾಹಿನಿಗಳು, ರೇಡಿಯೋ, ಎಫ್.ಎಂಗಳು, ಸಾಮಾಜಿಕ ಜಾಲತಾಣಗಳನ್ನು ಅವಲಂಬಿಸಿರುತ್ತವೆ. ಆದ್ದರಿಂದ ಇವುಗಳ ಮೇಲೆ ನಿಗಾ ಇಡಲು ಚುನಾವಣಾ ಆಯೋಗದಿಂದ ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ. ಇದರಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾಗಿ ವಾರ್ತಾಧಿಕಾರಿಗಳನ್ನು ಒಳಗೊಂಡು ಜಿಲ್ಲಾ ಚುನಾವಣಾಧಿಕಾರಿಗಳು ಸಮಿತಿಯನ್ನು ರಚಿಸಬೇಕು.ಚುನಾವಣೆಗಾಗಿ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು ಪತ್ರಿಕೆಗಳು, ಸುದ್ದಿವಾಹಿನಿಗಳು ಮುಂತಾದ ಮಾಧ್ಯಮಗಳ ಮೂಲಕ ನೀಡುವ ಜಾಹೀರಾತುಗಳ ಮೇಲೆ, ಮಾಧ್ಯಮಗಳಲ್ಲಿ ಬರುವ ಸುದ್ದಿಗಳ ಮೇಲೆ ಸಮಿತಿಯು ನಿಗಾ ವಹಿಸಬೇಕು. ಪತ್ರಿಕೆಗಳಲ್ಲಿ ಪ್ರಕಟವಾಗುವ, ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುವ ಸಂದರ್ಶನ, ಏಕ ವ್ಯಕ್ತಿ ಕೇಂದ್ರಿತ ಸುದ್ದಿಗಳ ಮೇಲೆ ನಿಗಾ ವಹಿಸಿ, ಪೇಯ್ಡ್ ಸುದ್ದಿಯ ಕುರಿತು ಎಚ್ಚರಿಕೆ ವಹಿಸಬೇಕು. ಪೇಯ್ಡ್ ಸುದ್ದಿ ಎಂದು ಸಮಿತಿಯು ನಿರ್ಧರಿಸಿದ ಮೇಲೆ ಆಯೋಗದ ಮಾರ್ಗಸೂಚಿಯನ್ವಯ ಮುಂದಿನ ಕ್ರಮ ಕೈಗೊಳ್ಳಬೇಕು. ಜಾಹೀರಾತು ವೆಚ್ಚದ ಮಾಹಿತಿಯನ್ನು ಆರ್ ಓ, ಎಕ್ಷ್ಪೆಂಡಿಚರ್ ಅಧಿಕಾರಿಗೆ ಪ್ರತಿ ದಿನ ನೀಡಬೇಕು. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುವ ಜಾಹೀರಾತು, ಸುದ್ದಿಗಳನ್ನು ಗುರುತಿಸಿ ವರದಿ ಮಾಡಬೇಕು ಎಂದು ಮಾಧ್ಯಮ ಪ್ರಮಾಣೀಕರಣ ಹಾಗೂ ಮೇಲ್ವಿಚಾರಣಾ ಸಮಿತಿಯ ಕಾರ್ಯಗಳು, ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.ವಿಡಿಯೋ ಸಂವಾದದ ಬಳಿಕ ಜಿಲ್ಲಾ ಚುನಾವಣಾ ಹಾಗೂ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್. ಮಾತನಾಡಿಚುನಾವಣಾ ಅಕ್ರಮಗಳ ಬಗ್ಗೆ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಬಗ್ಗೆ ದಿನಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಆಗುವ ವರದಿಗಳನ್ನು ಕ್ಷಣ ಕ್ಷಣಕ್ಕೆ ಎಂ.ಸಿ.ಎಂ.ಸಿ ಸಮಿತಿಯು ವರದಿ ಮಾಡಬೇಕು. ಉಲ್ಲಂಘನೆ ಪ್ರಕರಣಗಳು ಹಾಗೂ ಚುನಾವಣಾ ಅಕ್ರಮಗಳ ವರದಿಗಳ ಮೇಲೆ ನಿರಂತರ ನಿಗಾವಹಿಸಬೇಕು. ಜಾಹೀರಾತುಗಳಿಗೆ ಅನುಮತಿಯನ್ನು ನೀಡುವಲ್ಲಿ ಹೆಚ್ಚಿನ ನಿಗಾವಹಿಸಿ ಕರ್ತವ್ಯ ಕರ್ತವ್ಯ ನಿರ್ವಹಿಸಬೇಕು.ಸಾಮಾಜಿಕ ಜಾಲತಾಣಗಳಾದ ಇನಸ್ಟಾಗ್ರಾಂ, ಫೇಸಬುಕ್, ಟ್ವಿಟ್ಟರ್, ಯೂ ಟ್ಯೂಬ್, ವಾಟ್ಸಆಪ್ ಚಾನೆಲ್ ಸೇರಿದಂತೆ ಇತರೆ ವೇದಿಕೆಗಳನ್ನು ಪ್ರಚಾರಕ್ಕಾಗಿ ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಹೆಚ್ಚಾಗಿ ಬಳಕೆ ಮಾಡುತ್ತಾರೆ. ಇವುಗಳ ಮೇಲೆ ನಿಗಾವಹಿಸಲು ನುರಿತ ಅಧಿಕಾರಿಗಳನ್ನು ನಿಯೋಜಿಸಲಾಗುವದು. ಈ ಸಾಮಾಜಿಕ ಜಾಲತಾಣಗಲ ನಿಗಾ ಸಮಿತಿ ಅಚ್ಚುಕಟ್ಟಾಗಿ ಕರ್ತವ್ಯ ನಿರ್ವಹಿಸಬೇಕು. ಉಲ್ಲಂಘನೆ ಪ್ರಕರಣ ಕಂಡುಬಂದಲ್ಲಿ ಕೂಡಲೇ ಸಮಿತಿಯ ಮುಖ್ಯಸ್ಥರಿಗೆ ವರದಿ ಮಾಡುವ ಮೂಲಕ ಕ್ರಮ ಕೈಗೊಳ್ಳಲು ಸೂಚಿಸಿದರು.ಸಂವಾದದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಎಸಿ ವೆಂಕಟೇಶ್ ನಾಯ್ಕ. ಮಾರುತಿ ಬ್ಯಾಕೋಡ, ಅಮಿತ ಬಿದರಿ, ವಸಂತ ಮಡ್ಲೂರ, ರಾಜು ಹೆಬ್ಬಳ್ಳಿ ಉಪಸ್ಥಿತರಿದ್ದರು.