ಸಾರಾಂಶ
ಇಂಡಿಯನ್ ಕೋಸ್ಟ್ಗಾರ್ಡ್ ಮಂಗಳೂರು ಇವರ 49ನೇ ಸ್ಥಾಪನ ದಿನ ಮತ್ತು 2025ರ ಗಣರಾಜ್ಯೋತ್ಸವದ ಅಂಗವಾಗಿ ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪೊಲೀಸ್ ಕರ್ನಾಟಕ ಜಂಟಿ ಆಶ್ರಯದಲ್ಲಿ ಬೀಚ್ ಸ್ವಚ್ಛತೆ ಬಗ್ಗೆ ಜನ ಜಾಗೃತಿ ಜಾಥಾಕ್ಕೆ ಮಂಗಳವಾರ ಮಲ್ಪೆಯಲ್ಲಿ ಕರಾವಳಿ ಕಾವಲು ಪೊಲೀಸ್ ಘಟಕದ ಎಸ್ಪಿ ಮಿಥುನ್ ಎಚ್.ಎನ್. ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಇಂಡಿಯನ್ ಕೋಸ್ಟ್ಗಾರ್ಡ್ ಮಂಗಳೂರು ಇವರ 49ನೇ ಸ್ಥಾಪನ ದಿನ ಮತ್ತು 2025ರ ಗಣರಾಜ್ಯೋತ್ಸವದ ಅಂಗವಾಗಿ ಕೋಸ್ಟ್ ಗಾರ್ಡ್ ಹಾಗೂ ಕರಾವಳಿ ಕಾವಲು ಪೊಲೀಸ್ ಕರ್ನಾಟಕ ಜಂಟಿ ಆಶ್ರಯದಲ್ಲಿ ಬೀಚ್ ಸ್ವಚ್ಛತೆ ಬಗ್ಗೆ ಜನ ಜಾಗೃತಿ ಜಾಥಾಕ್ಕೆ ಮಂಗಳವಾರ ಮಲ್ಪೆಯಲ್ಲಿ ಕರಾವಳಿ ಕಾವಲು ಪೊಲೀಸ್ ಘಟಕದ ಎಸ್ಪಿ ಮಿಥುನ್ ಎಚ್.ಎನ್. ಚಾಲನೆ ನೀಡಿದರು.ಇಂಡಿಯನ್ ಕೋಸ್ಟ್ಗಾರ್ಡ್ ಡೆಪ್ಯೂಟಿ ಕಮಾಂಡೆಂಟ್ ಸುರೇಂದ್ರ ಲಾಕ್ರಾ, ಕರಾವಳಿ ಕಾವಲು ಪೊಲೀಸ್ ಘಟಕದ ಪೊಲೀಸ್ ನಿರೀಕ್ಷಕ ಪ್ರಮೋದ್ ಕುಮಾರ್, ಲೋಕೇಶ್, ಮೂರ್ತಿ ಎಸ್. ನಾಯಕ್, ಮಲ್ಪೆ ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಸವಿತಾ ಖಾದ್ರಿ, ಸಹಾಯಕ ನಿರ್ದೇಶಕಿ ರೆನಿಟಾ ಡಿಸೋಜಾ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ, ಮೀನುಗಾರರ ಮುಖಂಡರಾದ ರವಿರಾಜ್, ಸುಭಾಷ್ ಮೆಂಡನ್, ಸಾಧು ಸಾಲ್ಯಾನ್, ನಾಗರಾಜ ಸುವರ್ಣ, ಪಾಜಕ ಆನಂದತೀರ್ಥ ಪದವಿ ಪೂರ್ವ ಕಾಲೇಜಿನ ಎನ್ಸಿಸಿ ಅಧಿಕಾರಿ ಗೀತಾ ಪ್ರವೀಣ್ ಭಟ್, ನೇಷನ್ ಫಸ್ಟ್ ಸಂಸ್ಥೆಯ ಸೂರಜ್ ಕಿದಿಯೂರು ಉಪಸ್ಥಿತರಿದ್ದರು.ಇಂಡಿಯನ್ ಕೋಸ್ಟ್ಗಾರ್ಡ್, ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಚೇರಿ, ಸಿಎಸ್ಪಿ ಹೆಜಮಾಡಿ ಮಲ್ಪೆ ಮತ್ತು ಗಂಗೊಳ್ಳಿ ಠಾಣೆಯ ಅಧಿಕಾರಿ ಮತ್ತು ಕೆಎನ್ಡಿ ಸಿಬ್ಬಂದಿ, ಪಾಜಕ ಆನಂದತೀರ್ಥ ಪದವಿ ಪೂರ್ವ ಕಾಲೇಜ್ನ ಎನ್ಸಿಸಿ ವಿದ್ಯಾರ್ಥಿಗಳು, ನೇಷನ್ ಫಸ್ಟ್ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಮಲ್ಪೆ ಮೀನುಗಾರರ ಸಂಘದ ಪದಾಧಿಕಾರಿಗಳು ಕಾಲ್ನಡಿಗೆ ಜಾಥಾದಲ್ಲಿ ಭಾಗವಹಿಸಿದ್ದರು.ಮಲ್ಪೆ ಕರಾವಳಿ ಕಾವಲು ಪೊಲೀಸ್ ಕೇಂದ್ರ ಕಚೇರಿಯಿಂದ ಹೊರಟ ಜಾಥಾವು, ಸೀವಾಕ್, ಮಲ್ಪೆ ಬೀಚ್, ವಡಬಾಂಡೇಶ್ವರ, ಸಿಟಿಜನ್ ಸರ್ಕಲ್, ಮಲ್ಪೆ ಬಸ್ ನಿಲ್ದಾಣ ಮಾರ್ಗವಾಗಿ ವಾಪಸ್ ಕೇಂದ್ರ ಕಚೇರಿ ತಲುಪಿತು.