ಸುಲ್ಕೇರಿ-ಅಟ್ರಿಂಜೆ ರಸ್ತೆ ಅಭಿವೃದ್ಧಿ, ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ

| Published : Feb 09 2025, 01:32 AM IST

ಸುಲ್ಕೇರಿ-ಅಟ್ರಿಂಜೆ ರಸ್ತೆ ಅಭಿವೃದ್ಧಿ, ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ
Share this Article
  • FB
  • TW
  • Linkdin
  • Email

ಸಾರಾಂಶ

ಪಿ.ಎಂ. ಜನ್ ಮನ್ ಯೋಜನೆಯಡಿ 6.8 ಕೋಟಿ ರು. ವೆಚ್ಚದಲ್ಲಿ ನಡೆಯಲಿರುವ ಸುಲ್ಕೇರಿ ಗ್ರಾ.ಪಂ.ನ ಸುಲ್ಕೇರಿಯಿಂದ ಅಂಟ್ರಿಂಜೆ ತನಕದ ರಸ್ತೆ ಅಭಿವೃದ್ಧಿ ಹಾಗೂ ಸೇತುವೆ ನಿರ್ಮಾಣಕ್ಕೆ ಸಂಸದ ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು.

ಗ್ರಾಮಾಂತರ ಪ್ರದೇಶದ ಉನ್ನತಿಗೆ ಸಂಕಲ್ಪ: ಸಂಸದ ಕ್ಯಾ.ಚೌಟ

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ದೇಶದ ಕಟ್ಟಕಡೆಯ ಜನರೂ ಅಭಿವೃದ್ಧಿಯ ಫಲವನ್ನು ಉಣ್ಣಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿಯವರ ಆಶಯ. ಹೀಗಾಗಿ ಗ್ರಾಮಾಂತರ ಪ್ರದೇಶದ ಉನ್ನತಿಗೆ ಹಗಲು ರಾತ್ರಿ ದುಡಿಯುವ ಸಂಕಲ್ಪ ನನ್ನದು ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು.ಅವರು ಪಿ.ಎಂ. ಜನ್ ಮನ್ ಯೋಜನೆಯಡಿ 6.8 ಕೋಟಿ ರು. ವೆಚ್ಚದಲ್ಲಿ ನಡೆಯಲಿರುವ ಸುಲ್ಕೇರಿ ಗ್ರಾ.ಪಂ.ನ ಸುಲ್ಕೇರಿಯಿಂದ ಅಂಟ್ರಿಂಜೆ ತನಕದ ರಸ್ತೆ ಅಭಿವೃದ್ಧಿ ಹಾಗೂ ಸೇತುವೆ ನಿರ್ಮಾಣಕ್ಕೆ ಶನಿವಾರ ಶಿಲಾನ್ಯಾಸ ನೆರವೇರಿಸಿ ಹಾಗೂ ಗ್ರಾಮಸ್ಥರ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಕೊರಗ ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರುವಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಎಲ್ಲ ಸ್ತರಗಳಲ್ಲಿ ಕೊರಗ ಸಮಾಜದ ಬಂಧುಗಳನ್ನು ಗಟ್ಟಿಗೊಳಿಸಿ ರಾಷ್ಟ್ರ ನಿರ್ಮಾಣದ ಕೆಲಸದಲ್ಲಿ ಜೋಡಿಸುವ ದೃಷ್ಟಿಯಿಂದ ಪಿ‌ಎಂ ಜನ್ ಮನ್ ಯೋಜ‌ನೆ ಜಾರಿಯಲ್ಲಿದೆ ಎಂದ ಅವರು ಕೊರಗ ಸಮಾಜದ ಬಂಧುಗಳಿಗೋಸ್ಕರ ದ.ಕ. ಜಿಲ್ಲೆಯ ನಾಲ್ಕು ಕಡೆಗಳಲ್ಲಿ 60 ಲಕ್ಷ ರು. ವೆಚ್ಚದಲ್ಲಿ ಮಾಹಿತಿ ಸೆಂಟರ್ ನಿರ್ಮಾಣವಾಗಲಿದೆ ಎಂಬ ಮಾಹಿತಿ ನೀಡಿದರು.

ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ, ಸುಲ್ಕೇರಿ ಪಂಚಾಯಿತಿ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ಶುಭಕರ ಬಂಗೇರ, ಮಾಜಿ ಅಧ್ಯಕ್ಷರಾದ ನಾರಾಯಣ ಪೂಜಾರಿ, ಯಶೋದಾ ಎಲ್. ಬಂಗೇರ, ಬಿಜೆಪಿ ಮುಖಂಡ ಸದಾನಂದ ಪೂಜಾರಿ ಉಂಗಿಲಬೈಲು, ಉದ್ಯಮಿ ಸುಂದರ ಶೆಟ್ಟಿ, ಬ್ಯಾಂಕ್ ಉದ್ಯೋಗಿ ಸುಧೀರ್ ಸೂರ್ಯನಾರಾಯಣ ಕೃಪಾ, ಶಿರ್ಲಾಲು ಹಾ.ಉ. ಸಂಘ ಅಧ್ಯಕ್ಷ ಮಾಧವ ಶಿರ್ಲಾಲು, ತಾ.ಪಂ. ಮಾಜಿ ಸದಸ್ಯ ಸುಧೀರ್ ಆರ್. ಸುವರ್ಣ, ನಾರಾವಿ ಸಿಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಗೌಡ, ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ, ಸುಲ್ಕೇರಿ ಗ್ರಾ.ಪಂ. ಸದಸ್ಯರಾದ ಪೂರ್ಣಿಮಾ, ಪ್ರೇಮಾ, ಪ್ರಮುಖರಾದ ಎಚ್.ಎಲ್. ರಾವ್, ರಾಜು ಪೂಜಾರಿ, ಮೋಹನ್ ಅಂಡಿಂಜೆ, ಯೋಗೀಶ್ ಪೂಜಾರಿ ಬೊಳುವಾಲ್, ಎಂಜಿನಿಯರ್ ರಾಜಾರಾಮ್, ಗುತ್ತಿಗೆದಾರ ನವೀನ್ ಹೆಗ್ಡೆ ಕಾರ್ಕಳ, ಪಾರ್ಶ್ವನಾಥ ಜೈನ್, ವಸಂತ ಪೂಜಾರಿ, ಗಣೇಶ್ ಹೆಗ್ಡೆ ನಾರಾವಿ, ಜಗದೀಶ್ ಹೆಗ್ಡೆ ಕೊಕ್ರಾಡಿ, ವಿಜಯ ಗೌಡ ವೇಣೂರು, ಅರುಣ್ ಕುಲಾಲ್ ಮುಡಿಪಿರೆ, ಸಂಜೀವ ಶೆಟ್ಟಿ ಸುಲ್ಕೇರಿ, ಬಾಲಕೃಷ್ಣ ಮನ್ನಡ್ಕ, ಕೆ.ಸತ್ಯನಾರಾಯಣ ನೆಕ್ಕಿನಡ್ಕ, ನಾರಾಯಣ ಕೊರಗ ಅಂಟ್ರಿಂಜೆ, ವಿಶ್ವನಾಥ ಶೆಟ್ಟಿ, ವಾಸು ಭಟ್, ರಮಾನಾಥ ಪೂಜಾರಿ, ರಾಜು ಪೂಜಾರಿ ಪೆರಾಡಲು ಹಾಗೂ ಇತರರು ಉಪಸ್ಥಿತರಿದ್ದರು.ವಿಜಯ್ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು.