ಕನ್ನಡಪ್ರಭ ವಾರ್ತೆ ಬೆಳಗಾವಿ

ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ ಹೂವಿನಶಿಗ್ಲಿ ವಿರಕ್ತಮಠದ ಪ್ರತಿಷ್ಠಿತ ಗುರುಕುಲ ಶಿಕ್ಷಣ ಸಂಸ್ಥೆಯ ಗುರುಕುಲ ವಸತಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಅನಾಥ ಮಕ್ಕಳು ಉಚಿತವಾಗಿ ಪ್ರವೇಶ ಪಡೆಯಬಹುದಾಗಿದ್ದು, ಪ್ರವೇಶಾತಿಗಳು ಆರಂಭವಾಗಿವೆ.

ಶಿಕ್ಷಣ ಸಂಸ್ಥೆಯಲ್ಲಿ ತಂದೆ-ತಾಯಿವಿಲ್ಲದ ಅನಾಥ ಮಕ್ಕಳಿಗೆ 5 ರಿಂದ 10ನೇ ತರಗತಿಯವರೆಗೆ ಊಟ, ವಸತಿ ಮತ್ತು ಶಿಕ್ಷಣವನ್ನು ಉಚಿತವಾಗಿ ನೀಡಲಾಗುತ್ತಿದೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆ ಮೂಲಕ ಕೋರಲಾಗಿದೆ. ಮೇ 31 ರೊಳಗಾಗಿ ಮಗುವಿನ ದಾಖಲೆಗಳೊಂದಿಗೆ ಸಂಸ್ಥೆಗೆ ಆಗಮಿಸಿ ಪ್ರವೇಶ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿ ಆರ್.ಜಿ.ಚಿಕ್ಕಮಠ ಮೊ.8217236105 ಸಂಪರ್ಕಿಸಿ.