ಕರುನಾಡ ವೇದಿಕೆಯಿಂದ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

| Published : Apr 29 2024, 01:32 AM IST

ಕರುನಾಡ ವೇದಿಕೆಯಿಂದ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಮಿಕರು ಮತ್ತು ಕುಟುಂಬಸ್ಥರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಾವಿರಾರು ರೂಪಾಯಿ ಖರ್ಚು ಮಾಡಬೇಕಾಗುತ್ತದೆ. ಆದರೆ ಆರೋಗ್ಯ ಶಿಬಿರಗಳಲ್ಲಿ ಉಚಿತವಾಗಿ ಚಿಕಿತ್ಸೆ, ಔಷಧಿಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಸೌಂದರ್ಯ ಕಾಲೇಜಿನ ಸಂಸ್ಥಾಪಕ ಪಿ.ಮಂಜಪ್ಪ ತಿಳಿಸಿದರು.

ಕನ್ನಡಪ್ರಭ ವಾರ್ತೆ ಪೀಣ್ಯ ದಾಸರಹಳ್ಳಿ

ಕಾರ್ಮಿಕರು ಮತ್ತು ಕುಟುಂಬಸ್ಥರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಸಾವಿರಾರು ರೂಪಾಯಿ ಖರ್ಚು ಮಾಡಬೇಕಾಗುತ್ತದೆ. ಆದರೆ ಆರೋಗ್ಯ ಶಿಬಿರಗಳಲ್ಲಿ ಉಚಿತವಾಗಿ ಚಿಕಿತ್ಸೆ, ಔಷಧಿಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಸೌಂದರ್ಯ ಕಾಲೇಜಿನ ಸಂಸ್ಥಾಪಕ ಪಿ.ಮಂಜಪ್ಪ ತಿಳಿಸಿದರು.

ಭುವನೇಶ್ವರಿನಗರದಲ್ಲಿ ಕರುನಾಡ ಕಾರ್ಮಿಕರ ವೇದಿಕೆಯಿಂದ ಆಯೋಜಿಸಲಾದ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಮಾತನಾಡಿದರು. ಕಾಂಗ್ರೆಸ್ ಮುಖಂಡ ಎಂ.ಕೀರ್ತನ್ ಕುಮಾರ್ ಮಾತನಾಡಿ, ಕಾರ್ಮಿಕರ ಆರೋಗ್ಯದ ಹಿತದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣೆಗಳನ್ನು ಮಾಡಿಸಿ ಅವರಿಗೆ ಚಿಕಿತ್ಸೆ ವೆಚ್ಚದ ಸೌಲಭ್ಯವನ್ನು ನೀಡುತ್ತಿರುವ ಕಾರ್ಮಿಕ ವೇದಿಕೆಯವರು ಇನ್ನೂ ಹೆಚ್ಚಿನ ಆರೋಗ್ಯದ ಜಾಗೃತಿ ಮೂಡಿಸುವ ಕೆಲಸ ಮಾಡಲಿ ಎಂದರು.

ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಚಂದ್ರುಗೌಡ ಮಾತನಾಡಿ, ರಾಜ್ಯದ್ಯಂತ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಚಿಕಿತ್ಸೆ ಮಾಡಿಸಲಾಗುತ್ತದೆ ಎಂದು ತಿಳಿಸಿದರು.

ಸಾಹಿತಿ ವೈ.ಬಿ.ಎಚ್ ಜಯದೇವ್, ಕಾಯಕಯೋಗಿ ಬಸವರಾಜಣ್ಣ, ಸಮಾಜ ಸೇವಕ ಎಂ.ಬಿ.ದಯಾನಂದ್, ರಾಜ್ಯ ಮಹಿಳಾ ಅಧ್ಯಕ್ಷೆ ಲಕ್ಷ್ಮೀಗೌಡ, ದಾಸರಹಳ್ಳಿ ಘಟಕದ ಅಧ್ಯಕ್ಷ ಡಿ.ಎಸ್.ಸಂತೋಷ್, ಉಪಾಧ್ಯಕ್ಷ ಬಿ.ಕೆ.ಮೂರ್ತಿ, ಮಂಜುನಾಥ್, ನಿತೇಶ್, ಮಂಜುನಾಥ್ ಇದ್ದರು.