ಅತಿವೃಷ್ಟಿಯಿಂದ ಹಾಳಾದ ಮುಂಗಾರು ಹಂಗಾಮಿನ ಬೆಳೆಗಳಿಗೆ ಪರಿಹಾರಕ್ಕೆ ಆಗ್ರಹಲಕ್ಷ್ಮೇಶ್ವರತಾಲೂಕಿನಲ್ಲಿ ಕಳೆದ 15-20 ದಿನಗಳಿಂದ ಬಿಟ್ಟು ಬಿಡದೆ ಮುಂಗಾರು ಮಳೆ ಸುರಿಯುತ್ತಿರುವುದರಿಂದ 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ ಹೆಸರು, ಈರುಳ್ಳಿ, ಬಿಟಿ ಹತ್ತಿ, ಬೊಳ್ಳೊಳ್ಳಿ, ಮೆಣಸಿನಕಾಯಿ ಗಿಡಗಳು, ಎಳ್ಳು, ಗೋವಿನ ಜೋಳ ಮುಂತಾದ ಬೆಳೆಗಳು ಹಾಳಾಗಿ ಹೋಗುತ್ತಿದ್ದು ಸರ್ಕಾರ ಕೂಡಲೆ ಬೆಳೆ ವಿಮೆ ಹಾಗೂ ಅತಿವೃಷ್ಟಿಯ ಪರಿಹಾರ ನೀಡುವ ಮೂಲಕ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಲಕ್ಷ್ಮೇಶ್ವರ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಚನ್ನಪ್ಪ ಷಣ್ಮುಖಿ ಆಗ್ರಹಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.