ರೈತ ವೀರಗಲ್ಲ, ಸ್ಮಾರಕ ಸ್ಥಾಪನೆಗೆ ಆಗ್ರಹರೈತ ಹೋರಾಟದಲ್ಲಿ ವೀರ ಮರಣ ಹೊಂದಿದ ಈರಪ್ಪ ಕಡ್ಲಿಕೊಪ್ಪ ಅವರ ವೀರಗಲ್ಲ ಸದ್ಯ ಖಾಸಗಿ ಜಾಗೆಯಲ್ಲಿದೆ. ಆ ವೀರಗಲ್ಲನ್ನು ಸರ್ಕಾರಿ ಜಾಗೆಯಲ್ಲಿ ಸ್ಥಾಪನೆ ಮಾಡಿ ಸ್ಮಾರಕ ನಿರ್ಮಿಸಬೇಕೆಂದು ಕಳೆದ ನಾಲ್ಕು ದಶಕಗಳಿಂದ ಸರ್ಕಾರಗಳಿಗೆ ಮನವಿ ಮಾಡಿಕೊಂಡರೂ ಪ್ರಯೋಜನವಾಗಿಲ್ಲ.