ಬೆಳೆವಿಮೆ, ಬರ ಪರಿಹಾರಕ್ಕೆ ಮೊರೆ ಇಟ್ಟ ರೈತರುನರಗುಂದ ಪಟ್ಟಣದ ತಾಪಂ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ನೇತೃತ್ವದಲ್ಲಿ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಯಿತು. ಒಟ್ಟು 77 ಅರ್ಜಿಗಳು ಸಲ್ಲಿಕೆಯಾದವು. ಅವುಗಳಲ್ಲಿ 35ಕ್ಕೂ ಹೆಚ್ಚು ಅರ್ಜಿಗಳು ಬೆಳೆ ವಿಮೆ, ಬರ ಪರಿಹಾರಕ್ಕೆ ಸಂಬಂಧಿಸಿದ್ದಾಗಿದ್ದವು.