ಕಾಂಗ್ರೆಸ್ನಿಂದ ಖಜಾನೆ ಲೂಟಿ: ಸಿ.ಸಿ. ಪಾಟೀಲ್ತೈಲ ಬೆಲೆ, ಇತರ ಬೆಲೆ ಏರಿಕೆ ಖಂಡಿಸಿ ಸೋಮವಾರ ನರಗುಂದ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪುರಸಭೆ ಆವರಣದಿಂದ ಬೈಕ್ ಹೊತ್ತ ಎತ್ತಿನ ಗಾಡಿ ಹಾಗೂ ಇಂಧನವಿಲ್ಲದ ಕಾರನ್ನು ತಳ್ಳುತ್ತಾ ಶಿವಾಜಿ ಮಹಾರಾಜ್ ವೃತ್ತದ ವರೆಗೆ ಮೆರವಣಿಗೆಯಲ್ಲಿ ಬಿಜೆಪಿ ಕಾರ್ಯಕರ್ತರು ಆಗಮಿಸಿದರು.