ನಮ್ಮ ಓದು ಜೀವನವನ್ನು ಪರಿಪೂರ್ಣಗೊಳಿಸುವಂತಾಗಲಿ: ಎಂ.ಎ. ರಡ್ಡೇರಸತತ ಪರಿಶ್ರಮ ಮತ್ತು ಓದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅವಶ್ಯವಾಗಿ ಬೇಕು. ನಾವು ದಿನನಿತ್ಯ ದಿನಪತ್ರಿಕೆಗಳನ್ನು ಚಿತ್ತ ಕೊಟ್ಟು ಓದಿದರೆ ಐಎಎಸ್, ಐಪಿಎಸ್, ಐಎಫ್ಎಸ್ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸುಲಭವಾಗಿ ತೇರ್ಗಡೆಯಾಗಬಹುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಎಂ.ಎ. ರಡ್ಡೇರ ಹೇಳಿದರು.